ನಾಮಪತ್ರ ಸಲ್ಲಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ 
ದೇಶ

ವಾಜಪೇಯಿಯ ರಾಷ್ಟ್ರಪತಿ ಅಭ್ಯರ್ಥಿ ಕಲಾಂಗೆ ಕಾಂಗ್ರೆಸ್ ಸಹ ಬೆಂಬಲ ನೀಡಿತ್ತು!

ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2002ರಲ್ಲಿ ನಡೆದ...

ನವದೆಹಲಿ: ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2002ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ, ಖ್ಯಾತ ವಿಜ್ಞಾನಿ ಅಬ್ದುಲ್‌ ಕಲಾಂ ಅವರ ಗೆಲುವಿಗಾಗಿ ಎಡರಂಗ ಹೊರತುಪಡಿಸಿ ಅಂದಿನ ಪ್ರಮುಖ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಹಾಗೂ ಇತರೆ ಪ್ರಾದೇಶಿಗಳ ಪಕ್ಷಗಳ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಅವರು ಅದೊಂದು ದಿನ, ಚೆನ್ನೈನಲ್ಲಿ ಕಾರ್ಯಕ್ರಮವೊಂದಲ್ಲಿ ಉಪನ್ಯಾಸ ನೀಡುತ್ತಿದ್ದ ಕ್ಷೀಪಣಿ ತಜ್ಞ ಕಲಾಂ ಅವರಿಗೆ ಕರೆ ಮಾಡಿ, ನಾವು ನಿಮ್ಮನ್ನು ರಾಷ್ಟ್ರಪತಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ನೀವು ಸ್ಪರ್ಧಿಸಲು ಒಪ್ಪುವಿರಾ ಎಂದು ಕೇಳಿದ್ದರು. ಆಗ ನನಗೆ ಎರಡು ಗಂಟೆಗಳ ಕಾಲಾವಕಾಶ ಕೊಡಿ ಎಂದು ಕೇಳಿದ್ದ ಅಬ್ದುಲ್‌ ಕಲಾಂ ಅವರು, ತಮ್ಮ ಸ್ನೇಹಿತರನ್ನು ಸಂಪರ್ಕಿಸಿ ಆಗಬಹುದು ಎಂದು ಹೇಳಿದ್ದರು. ಕಡೆಗೆ ಎನ್‌.ಡಿ.ಎ. ಸರ್ಕಾರ ಕಲಾಂ ಅವರನ್ನು ತಮ್ಮ ಸ್ಪರ್ಧಿಯನ್ನಾಗಿ ಆಯ್ಕೆ ಮಾಡಿದರೆ, ಎಡಪಕ್ಷಗಳು ಲಕ್ಷ್ಮೀ ಸೆಹಗಲ್‌ ಅವರನ್ನು ಕಣಕ್ಕಿಳಿಸಿದ್ದವು. 
ವಿಶೇಷವೆಂದರೆ, ಆಗ ಪ್ರಮುಖ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌ ಕೂಡ ಕಲಾಂ ಅವರಿಗೆ ಬೆಂಬಲ ನೀಡಿತ್ತು. ಹೀಗಾಗಿ ಕಲಾಂ ಅವರು ನಿರಾಯಾಸವಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ, ಕಲಾಂ ಮತ್ತು ಅಟಲ್‌ ಅವರದ್ದು ಅದ್ಬುತ ಜೋಡಿಯಾಗಿತ್ತು. 2002ರಿಂದ 2004ರವರೆಗೆ ಇಬ್ಬರೂ ಜತೆಗೂಡಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT