ನಾಮಪತ್ರ ಸಲ್ಲಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ 
ದೇಶ

ವಾಜಪೇಯಿಯ ರಾಷ್ಟ್ರಪತಿ ಅಭ್ಯರ್ಥಿ ಕಲಾಂಗೆ ಕಾಂಗ್ರೆಸ್ ಸಹ ಬೆಂಬಲ ನೀಡಿತ್ತು!

ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2002ರಲ್ಲಿ ನಡೆದ...

ನವದೆಹಲಿ: ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2002ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ, ಖ್ಯಾತ ವಿಜ್ಞಾನಿ ಅಬ್ದುಲ್‌ ಕಲಾಂ ಅವರ ಗೆಲುವಿಗಾಗಿ ಎಡರಂಗ ಹೊರತುಪಡಿಸಿ ಅಂದಿನ ಪ್ರಮುಖ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಹಾಗೂ ಇತರೆ ಪ್ರಾದೇಶಿಗಳ ಪಕ್ಷಗಳ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಅವರು ಅದೊಂದು ದಿನ, ಚೆನ್ನೈನಲ್ಲಿ ಕಾರ್ಯಕ್ರಮವೊಂದಲ್ಲಿ ಉಪನ್ಯಾಸ ನೀಡುತ್ತಿದ್ದ ಕ್ಷೀಪಣಿ ತಜ್ಞ ಕಲಾಂ ಅವರಿಗೆ ಕರೆ ಮಾಡಿ, ನಾವು ನಿಮ್ಮನ್ನು ರಾಷ್ಟ್ರಪತಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ನೀವು ಸ್ಪರ್ಧಿಸಲು ಒಪ್ಪುವಿರಾ ಎಂದು ಕೇಳಿದ್ದರು. ಆಗ ನನಗೆ ಎರಡು ಗಂಟೆಗಳ ಕಾಲಾವಕಾಶ ಕೊಡಿ ಎಂದು ಕೇಳಿದ್ದ ಅಬ್ದುಲ್‌ ಕಲಾಂ ಅವರು, ತಮ್ಮ ಸ್ನೇಹಿತರನ್ನು ಸಂಪರ್ಕಿಸಿ ಆಗಬಹುದು ಎಂದು ಹೇಳಿದ್ದರು. ಕಡೆಗೆ ಎನ್‌.ಡಿ.ಎ. ಸರ್ಕಾರ ಕಲಾಂ ಅವರನ್ನು ತಮ್ಮ ಸ್ಪರ್ಧಿಯನ್ನಾಗಿ ಆಯ್ಕೆ ಮಾಡಿದರೆ, ಎಡಪಕ್ಷಗಳು ಲಕ್ಷ್ಮೀ ಸೆಹಗಲ್‌ ಅವರನ್ನು ಕಣಕ್ಕಿಳಿಸಿದ್ದವು. 
ವಿಶೇಷವೆಂದರೆ, ಆಗ ಪ್ರಮುಖ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌ ಕೂಡ ಕಲಾಂ ಅವರಿಗೆ ಬೆಂಬಲ ನೀಡಿತ್ತು. ಹೀಗಾಗಿ ಕಲಾಂ ಅವರು ನಿರಾಯಾಸವಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ, ಕಲಾಂ ಮತ್ತು ಅಟಲ್‌ ಅವರದ್ದು ಅದ್ಬುತ ಜೋಡಿಯಾಗಿತ್ತು. 2002ರಿಂದ 2004ರವರೆಗೆ ಇಬ್ಬರೂ ಜತೆಗೂಡಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ