ನಾಮಪತ್ರ ಸಲ್ಲಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ 
ದೇಶ

ವಾಜಪೇಯಿಯ ರಾಷ್ಟ್ರಪತಿ ಅಭ್ಯರ್ಥಿ ಕಲಾಂಗೆ ಕಾಂಗ್ರೆಸ್ ಸಹ ಬೆಂಬಲ ನೀಡಿತ್ತು!

ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2002ರಲ್ಲಿ ನಡೆದ...

ನವದೆಹಲಿ: ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು 2002ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ, ಖ್ಯಾತ ವಿಜ್ಞಾನಿ ಅಬ್ದುಲ್‌ ಕಲಾಂ ಅವರ ಗೆಲುವಿಗಾಗಿ ಎಡರಂಗ ಹೊರತುಪಡಿಸಿ ಅಂದಿನ ಪ್ರಮುಖ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಹಾಗೂ ಇತರೆ ಪ್ರಾದೇಶಿಗಳ ಪಕ್ಷಗಳ ಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಅವರು ಅದೊಂದು ದಿನ, ಚೆನ್ನೈನಲ್ಲಿ ಕಾರ್ಯಕ್ರಮವೊಂದಲ್ಲಿ ಉಪನ್ಯಾಸ ನೀಡುತ್ತಿದ್ದ ಕ್ಷೀಪಣಿ ತಜ್ಞ ಕಲಾಂ ಅವರಿಗೆ ಕರೆ ಮಾಡಿ, ನಾವು ನಿಮ್ಮನ್ನು ರಾಷ್ಟ್ರಪತಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ನೀವು ಸ್ಪರ್ಧಿಸಲು ಒಪ್ಪುವಿರಾ ಎಂದು ಕೇಳಿದ್ದರು. ಆಗ ನನಗೆ ಎರಡು ಗಂಟೆಗಳ ಕಾಲಾವಕಾಶ ಕೊಡಿ ಎಂದು ಕೇಳಿದ್ದ ಅಬ್ದುಲ್‌ ಕಲಾಂ ಅವರು, ತಮ್ಮ ಸ್ನೇಹಿತರನ್ನು ಸಂಪರ್ಕಿಸಿ ಆಗಬಹುದು ಎಂದು ಹೇಳಿದ್ದರು. ಕಡೆಗೆ ಎನ್‌.ಡಿ.ಎ. ಸರ್ಕಾರ ಕಲಾಂ ಅವರನ್ನು ತಮ್ಮ ಸ್ಪರ್ಧಿಯನ್ನಾಗಿ ಆಯ್ಕೆ ಮಾಡಿದರೆ, ಎಡಪಕ್ಷಗಳು ಲಕ್ಷ್ಮೀ ಸೆಹಗಲ್‌ ಅವರನ್ನು ಕಣಕ್ಕಿಳಿಸಿದ್ದವು. 
ವಿಶೇಷವೆಂದರೆ, ಆಗ ಪ್ರಮುಖ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌ ಕೂಡ ಕಲಾಂ ಅವರಿಗೆ ಬೆಂಬಲ ನೀಡಿತ್ತು. ಹೀಗಾಗಿ ಕಲಾಂ ಅವರು ನಿರಾಯಾಸವಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ, ಕಲಾಂ ಮತ್ತು ಅಟಲ್‌ ಅವರದ್ದು ಅದ್ಬುತ ಜೋಡಿಯಾಗಿತ್ತು. 2002ರಿಂದ 2004ರವರೆಗೆ ಇಬ್ಬರೂ ಜತೆಗೂಡಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT