ಮಹಾರಾಷ್ಟ್ರ: ವಾಜಪೇಯಿಗೆ ಗೌರವ ಸಲ್ಲಿಸಲು ನಕಾರ- ಎಐಎಂಐಎಂ ಕಾರ್ಪೊರೇಟರ್ ಬಂಧನ 
ದೇಶ

ಮಹಾರಾಷ್ಟ್ರ: ವಾಜಪೇಯಿಗೆ ಗೌರವ ಸಲ್ಲಿಸಲು ನಕಾರ- ಎಐಎಂಐಎಂ ಕಾರ್ಪೊರೇಟರ್ ಬಂಧನ

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ನಿರಾಕರಿಸಿದ ಎಐಎಂಐಎಂ ಕಾರ್ಪೊರೇಟರ್ ಸಯ್ಯದ್ ಮಾಚೀನ್ ಎಂಬುವವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.

ಮಹಾರಾಷ್ಟ್ರ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರಿಗೆ ಗೌರವ ಸಲ್ಲಿಸಲು ನಿರಾಕರಿಸಿದ ಎಐಎಂಐಎಂ ಕಾರ್ಪೊರೇಟರ್ ಸಯ್ಯದ್ ಮಾಚೀನ್ ಎಂಬುವವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶನಿವಾರ ತಿಳಿದುಬಂದಿದೆ.
ಮಹಾರಾಷ್ಟ್ರದ ಔರಂಗಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಇತ್ತೀಚೆಗಷ್ಟೇ ವಿಧಿವಶರಾದ ಮಾಜಿ ಪ್ರಧಾನಿ ವಾಜಪೇಯಿಯವರಿಗೆ ಸಂತಾಪ ಸೂಚಿಸಲಾಗುತ್ತಿತ್ತು. 
ಈ ವೇಳೆ ಸಭೆಯಲ್ಲಿ ಹಾಜರಿದ್ದ ಮಾಟೀನ್ ಅವರು ಇದಕ್ಕೆ ನಿರಾಕರಿಸಿದ್ದಾರೆ. ಪರಿಣಾಮ ಔರಂಗಾಬಾದ್ ಪೊಲೀಸರು ಧಾರ್ಮಿಕ ನಂಬಿಕೆಗಳಿಗೆ ನೋವುಂಟು ಮಾಡಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿದ್ದಾರೆಂಬ ಆರೋಪದ ಮೇರೆಗೆ ಮಾಟೀನ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಇದಲ್ಲದೆ ಎಐಎಂಐಎಂ ಜಿಲ್ಲಾಧ್ಯಕ್ಷ ಜಾವೆದೇ ಖುರೇಷಿಯವರನ್ನು ಬಂಧನಕ್ಕೊಳಪಡಿಸಲಾಗಿದ್ದು, ಪೊಲೀಸರಿಗೆ ಬೆದರಿಕೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. 
ಇನ್ನು ವಾಜಪೇಯಿಯವರಿಗೆ ಗೌರವ ಸಲ್ಲಿಸಲು ನಿರಾಕರಿಸಿದ ಮಾಟೀನ್ ಅವರಿಗೆ ಬಿಜೆಪಿ ಕೌನ್ಸಿಲರ್ ಗಳಾದ ಪ್ರಮೋದ್ ರಾಥೋಡ್, ವಿಜಯ್ ಉಡಾಡೆ, ರಾಜ್ ವಾಂಖೆಡೆ ಥಳಿಸಿದ್ದು, ಇವರ ವಿರುದ್ಧ ಕೂಡ ಪ್ರಕರಗಳು ದಾಖಲಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್