ರಾಹುಲ್ ಗಾಂಧಿ ಮತ್ತು ಕಿರಣ್ ರಿಜಿಜು 
ದೇಶ

ಕೇರಳಕ್ಕೆ ಮತ್ತಷ್ಟು ಪರಿಹಾರ ಹಣ ನೀಡಿ- ರಾಹುಲ್: ರಾಜಕೀಯ ಮಾಡಬೇಡಿ ಪ್ಲೀಸ್- ಕಿರೆಣ್ ರಿಜಿಜು

ಭಾರೀ ಮಳೆ ಪ್ರವಾಹದಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಮತ್ತಷ್ಟು ಪರಿಹಾರ ಹಣ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ....

ನವದೆಹಲಿ: ಭಾರೀ ಮಳೆ ಪ್ರವಾಹದಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಮತ್ತಷ್ಟು ಪರಿಹಾರ ಹಣ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ,  ಕೇಂದ್ರ ಸರ್ಕಾರ ಕೇರಳಕ್ಕೆ 500 ಕೋಟಿ ರು ಮಧ್ಯಂತರ ಪರಿಹಾರ ನೀಡಿರುವುದಕ್ಕೆ  ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಹಣ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ,
ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ. ಕೇರಳ ಜನರನ್ನು ನರಳಲು ಬಿಡಬಾರದು, ಕೇರಳಕ್ಕೆ ಮತ್ತಷ್ಟು ಪರಿಹಾರ ಹಣ ನೀಡಿ, . ಈಗ ನೀಡಿರುವ ಅನುದಾನ ಯಾವುದಕ್ಕೂ ಕಾಗುವುದಿಲ್ಲ, ನೀವು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದ್ದೀರಾ. ಕೇರಳ ಜನ ನರಳು ಬಿಡಬೇಡಿ ಎಂದು ಹೇಳಿದ್ದಾರೆ.
ವಿಪತ್ತಿನ ಸಮಯದಲ್ಲಿ ರಾಜಕೀಯ ಮಾಡಬಾರದು, ಮಳೆ ಮತ್ತು ಪ್ರವಾಹಕ್ಕಾಗಿ ರಕ್ಷಮಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ, ವಿಪತ್ತಿನ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ನಿಂತು ಕೆಲಸ ಮಾಡಬೇಕು. ದಯವಿಟ್ಟು ರಾಜಕೀಯ ಮಾಡಬೇಡಿ, ನೂರಾರು ರಕ್ಷಣಾ ಪಡೆಗಳು 90 ಕ್ಕೂ ಏರ್ ಕ್ರಾಫ್ಟ್, 500 ಮೋಟಾರ್ ಬೋಟ್ಸ್,ಎನ್ ಡಿ ಆರ್ ಎಫ್, ನೌಕಾದಳ, ಹಾಗೂ ಅರೆ ಸೇನಾ ಪಡೆಗಳು ಪರಿಹಾರ ಕಾರ್ಯಕ್ಕಾಗಿ ತೆರಳಿವೆ ಎಂದು ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT