ನದಿಗೆ ತ್ಯಾಜ್ಯ ಸುರಿಯುತ್ತಿರುವ ದೃಶ್ಯ 
ದೇಶ

ಕೇರಳ: ಪ್ರವಾಹದಲ್ಲಿ ತೇಲಿ ಬಂದ ತ್ಯಾಜ್ಯ ಮತ್ತೆ ನದಿಗೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ತಿರುವನಂತಪುರಂ: ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಭೀಕರ ಪ್ರವಾಹಕ್ಕೆ ತುತ್ತಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲೆ ಸಂಗ್ರಹವಾಗಿದ್ದ ಅಪಾರ ಪ್ರಮಾಣದ ತ್ಯಾಜ್ಯವನ್ನು ಜೆಸಿಬಿಗಳ ನೆರವಿನಿಂದಾಗಿ ಮತ್ತೆ ನದಿಗೆ ಹಾಕಲಾಗುತ್ತಿದೆ. ಸ್ಥಳೀಯರೊಬ್ಬರು ಈ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.
ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ಅಧಿಕಾರಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರವಾಹದಿಂದ ನರಳುತ್ತಿರುವ ಕೇರಳದಲ್ಲಿ ನದಿಗೆ ತ್ಯಾಜ್ಯವನ್ನು ಸುರಿಯುವುದರಿಂದ ನೀರಿನ ಹರಿವಿನ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತದೆ. ನೀರಿನ ಹರಿವು ನಿಧಾನವಾಗಿ ಪ್ರವಾಹ ನೀರು ಸಮುದ್ರ ಸೇರುವುದು ತಡವಾಗುತ್ತದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರವಾಹದಿಂದಾಗಿ ರಸ್ತೆಗಳು ಕೊಚ್ಚಿಹೋಗಿದ್ದರೂ ತ್ಯಾಜ್ಯವನ್ನು ನದಿಗೆ ಸುರಿಯುತ್ತಿರುವುದು ನಿಜಕ್ಕೂ ಅಕ್ಷಮ್ಯ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT