ಹಾರ್ದಿಕ್ ಪಟೇಲ್ 
ದೇಶ

ಮೀಸಲಾತಿ ಪ್ರತಿಭಟನೆ: ಹಾರ್ದಿಕ್ ಪಟೇಲ್, ಬೆಂಬಲಿಗರ ಬಂಧನ

ಅಹಮದಾಬಾದ್ ನ ನಿಕೋಲ್ ಪ್ರದೇಶದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ಪಾಟೀದಾರ್....

ಅಹಮದಾಬಾದ್: ಅಹಮದಾಬಾದ್ ನ ನಿಕೋಲ್ ಪ್ರದೇಶದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ಹಾಗೂ ಅವರ ಬೆಂಬಲಿಗರನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಪಾಟೀದಾರ್ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಆಗಸ್ಟ್ 25ರಂದು ಬೃಹತ್ ಪ್ರತಿಭಟನೆಗೆ ಮೈದಾನ ನೀಡಬೇಕು ಎಂದು ಒತ್ತಾಯಿಸಿ ಇಂದು ಪಾರ್ಕಿಂಗ್ ಸ್ಥಳದಲ್ಲೇ ಸಾಂಕೇತಿಕ ಉಪವಾಸ ನಡೆಸುತ್ತಿದ್ದರು. 
ಸ್ಥಳಕ್ಕೆ ಆಗಮಿಸಿದ ಕ್ರೈಂ ಬ್ರಾಂಚ್ ಪೊಲೀಸರು ಹಾರ್ದಿಕ್ ಪಟೇಲ್ ಹಾಗೂ ಅವರ 30 ಮಂದಿ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ ಎಂದು ಕ್ರೈಂ ಬ್ರಾಂಚ್ ಡಿಸಿಪಿ ದೀಪನ್ ಭದ್ರನ್ ಅವರು ತಿಳಿಸಿದ್ದಾರೆ.
ಕಾನೂನು ಬಾಹಿರವಾಗಿ ಗುಂಪು ಸೇರಿದೆ ಆರೋಪದ ಮೇಲೆ ಹಾರ್ದಿಕ್ ಪಟೇಲ್ ಹಾಗೂ ಅವರ ಬೆಂಬಲಗರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಮೀಸಲಾತಿಗೆ ಒತ್ತಾಯಿಸಿ ಆಗಸ್ಟ್ 25ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹಾರ್ದಿಕ್ ಪಟೇಲ್ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT