ನವಜೋತ್ ಸಿಂಗ್ ಸಿಧು 
ದೇಶ

ಪಿಒಕೆ ಅಧ್ಯಕ್ಷರ ಪಕ್ಕದಲ್ಲೇ ಆಸೀನ ವಿವಾದ: ಅಲ್ಲಿಯೇ ಕುಳಿತುಕೊಳ್ಳಲು ಕೇಳಿದರು- ಸಿಧು

ನಾನು ಎಲ್ಲೋ ಕುಳಿತುಕೊಳ್ಳುತ್ತಿದ್ದೆ ಆದರೆ ಅಲ್ಲಿ ಕುಳಿತುಕೊಳ್ಳಲು ಅವರು ನನ್ನನ್ನು ಕೇಳಿದ್ದರಿಂದ ಪಿಒಕೆ ಅಧ್ಯಕ್ಷರ ಬಳಿ ಕುಳಿತುಕೊಂಡಿದ್ದಾಗಿ ಪಾಕಿಸ್ತಾನ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹೋಗಿ ಬಂದಿರುವ ನವಜೋತ್ ಸಿಧು ಹೇಳಿದ್ದಾರೆ

ಪಂಜಾಬ್ : ಪಾಕ್ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಿಒಕೆ ಅಧ್ಯಕ್ಷರ ಪಕ್ಕದಲ್ಲೇ  ಕುಳಿತು ಸುದ್ದಿಯಾಗಿದ್ದ  ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಆತ್ತರಿ-ವಾಘಾ ಗಡಿ ಮೂಲಕ  ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲೋ ಕುಳಿತುಕೊಳ್ಳುತ್ತಿದ್ದೆ ಆದರೆ ಅಲ್ಲಿ ಕುಳಿತುಕೊಳ್ಳಲು ಅವರು ನನ್ನನ್ನು ಕೇಳಿದ್ದರಿಂದ  ಪಿಒಕೆ ಅಧ್ಯಕ್ಷರ ಬಳಿ ಕುಳಿತುಕೊಂಡಿದ್ದಾಗಿ ಪ್ರತಿಕ್ರಿಯಿಸಿದ್ದಾರೆ.

ಪಾಕ್ ಸೇನಾ ಮುಖ್ಯಸ್ಥ ಜನರಲ್ ಬಜ್ವಾ ನನ್ನ ಹತ್ತಿರ ಬಂದು ನಾವು ಅದೇ ಸಂಸ್ಕೃತಿಯವರಾಗಿದ್ದೇವೆ ಮತ್ತು ನಾವು ಗುರು ನಾನಕ್ ದೇವ್ ಅವರ 550 ನೇ ಪ್ರಕಾಶ್ ಪರ್ವಕ್ಕಾಗಿ  ಕಾರ್ತಾರ್ಪುರ್ ಗಡಿಯನ್ನು ತೆರೆಯುತ್ತೇವೆ ಎಂದು ಹೇಳಿದರು. ನಾನು ಬೇರೆ ಏನು ಮಾಡಬಹುದು  ಎಂದು ನುಣುಚಿಕೊಳ್ಳುವ ಪ್ರಯತ್ನ ಮಾಡಿದರು.

ಎಲ್ಲೋ ಗೌರವಾರ್ಥ ಅತಿಥಿಯಾಗಿ ನಿಮ್ಮನ್ನು ಆಹ್ವಾನಿಸಿದರೆ, ನಿಮ್ಮನ್ನು ಕೇಳಿದಾಗ ನೀವು ಕುಳಿತುಕೊಳ್ಳುತ್ತೀರಿ ತಾನೇ ಎಂದು ನವಜೋತ್ ಸಿಧು ಹೇಳಿದರು.

ಪಾಕ್ ಪ್ರಧಾನಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಧು ಅಲ್ಲಿನ ಸೇನಾ ಮುಖ್ಯಸ್ಥ ಜನರಲ್ ಕಮರ್‌ ಜಾವೇದ್‌ ಬಾಜ್ವಾ ಅವರನ್ನು ಆಲಿಂಗಿಸಿಕೊಂಡಿದ್ದು,  ಪಿಒಕೆ ಅಧ್ಯಕ್ಷರ ಪಕ್ಕದಲ್ಲೇ ಕುಳಿತಿದ್ದರು, ಇದರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.

ಈ ಮಧ್ಯೆ ಪಾಕ್ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿಧು ತೆರಳಿದದ್ದು ಅವರ ವೈಯಕ್ತಿಕ ಸಾಮರ್ಥ್ಯ ಆದರೆ.  ಪಿಓಕೆ ಅಧ್ಯಕ್ಷರ ಪಕ್ಕದಲ್ಲೇ ಕುಳಿತದ್ದು, ಮತ್ತು ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಆಲಂಗಿಸಿಕೊಂಡದ್ದು  ಒಪ್ಪುವಂತಹದ್ದಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT