ಸಿಧುರನ್ನು ಬರಮಾಡಿಕೊಂಡಿದ್ದ ಜನರಲ್ ಬಜ್ವಾ 
ದೇಶ

ಇಮ್ರಾನ್ ಖಾನ್ ಪ್ರಮಾಣ ವಚನದ ವೇಳೆ ಸಿಧು ಆಲಂಗಿಸಿದ ಪಾಕ್ ಸೇನಾ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ?

ನಿನ್ನೆ ಇಸ್ಲಾಮಾಬಾದ್ ನಲ್ಲಿ ಇಮ್ರಾನ್ ಖಾನ್ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರಿಗೆ ವಿಶಿಷ್ಯ ಅನುಭವವಾಗಿದೆಯಂತೆ..

ನವದೆಹಲಿ: ನಿನ್ನೆ ಇಸ್ಲಾಮಾಬಾದ್ ನಲ್ಲಿ ಇಮ್ರಾನ್ ಖಾನ್ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರಿಗೆ ವಿಶಿಷ್ಯ ಅನುಭವವಾಗಿದೆಯಂತೆ..
ಹೌದು.. ಪಾಕಿಸ್ತಾನದ ನೂತನ ಪ್ರಧಾನಿಯಾಗಿ ನಿನ್ನೆ ಮಾಜಿ ಕ್ರಿಕೆಟಿಗ ಹಾಗೂ ಪಿಟಿಐ ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮಕ್ಕೆ ಭಾರತದಿಂದ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮತ್ತು ನವಜೋತ್ ಸಿಂಗ್ ಸಿಧು ಅವರಿಗೆ ಅಹ್ವಾನ ನೀಡಲಾಗಿತ್ತು. ಈ ಮೂವರ ಪೈಕಿ ಸಿಧು ಮಾತ್ರ ಕಾರ್ಯಕ್ರಮಕ್ಕೆ ತೆರಳಿದ್ದರು. 
ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಧು ಅವರನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಜ್ವಾ ಅವರ ಸ್ವಾಗತಿಸಿದ್ದರು. ಅಲ್ಲದೆ ಸಿಧು ಅವರನ್ನು ಆಲಂಗಿಸಿಕೊಂಡು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ವೇಳೆ ಸಿಧು ಮತ್ತು ಬಜ್ವಾ ಕೆಲ ಕ್ಷಣಗಳ ಕಾಲ ಮಾತನಾಡಿದ್ದು, ಇವರಿಬ್ಬರು ಏನು ಮಾತನಾಡಿದರು ಎಂಬ ಕುತೂಹಲ ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಈ ಕುತೂಹಲಕ್ಕೆ ಸ್ವತಃ ಸಿಧು ತೆರೆ ಎಳೆದಿದ್ದು, ಬಜ್ವಾ ಹೇಳಿದ್ದೇನು ಎಂಬುದನ್ನು ವಿವರಿಸಿದ್ದಾರೆ.
ಕಾರ್ಯಕ್ರಮಕ್ಕೆ ತೆರಳಿದ ನನ್ನನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಪ್ರಮಾಣ ವಚನ ಸ್ವೀಕಾರದ ಬಳಿಕ ನನ್ನ ಬಳಿ ಬಂದ ಬಜ್ವಾ ಆತ್ಮೀಯವಾಗಿ ಆಲಂಗಿಸಿಕೊಂಡು ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದ ಜನರಲ್ ಎಂದು ಹಾಸ್ಯ ಚಟಾಕಿ ಹಾರಿಸಿದರು. ಅಲ್ಲದೆ ನಮಗೆ ಭಾರತದೊಂದಿಗೆ ದ್ವಂದ್ವವಲ್ಲ ಶಾಂತಿ ಬೇಕು ಎಂದು ಹೇಳಿದರು ಎಂದು ಸಿಧು ಹೇಳಿದ್ದಾರೆ.
ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ನಾನು ಪಾಕಿಸ್ತಾನಕ್ಕೆ ತೆರಳಿದ್ದು, ನಾನು ನನ್ನ ಜೀವನದಲ್ಲಿ ಮರೆಯಲಾಗದ ಘಟನೆಯಾಗಿದೆ ಎಂದು ಸಿಧು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT