ಪರಾಮರ್ಶನಾ ಸಭೆ 
ದೇಶ

ಕೇರಳ ಪ್ರವಾಹ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ನೇತೃತ್ವದಲ್ಲಿ ಪರಾಮರ್ಶನ ಸಭೆ

ಕೇರಳ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಅವರೊಂದಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಪರಾಮರ್ಶನಾ ಸಭೆ ನಡೆಸಿ, ಒಂದು ತಿಂಗಳ ಸಂಬಳವನ್ನು ಪರಿಹಾರ ನೀಡಲು ನಿರ್ಧರಿಸಲಾಯಿತು.

ನವದೆಹಲಿ: ಕೇರಳ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ಅವರೊಂದಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಪರಾಮರ್ಶನಾ ಸಭೆ ನಡೆಸಿ,  ಒಂದು ತಿಂಗಳ ಸಂಬಳವನ್ನು ಪರಿಹಾರ ನೀಡಲು ನಿರ್ಧರಿಸಲಾಯಿತು.

ಉಪರಾಷ್ಟ್ರಪತಿಗಳ ಕಾರ್ಯದರ್ಶಿ ಐ. ವಿ. ಸುಬ್ಬಾರಾವ್ ಮತ್ತು ಮೇಲ್ಮನೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಮಧ್ಯೆ ಕೇರಳದಲ್ಲಿನ ಪ್ರವಾಹ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು, ವಿವಿಧ ರಾಜ್ಯಗಳ ಮುಖಂಡರುಗಳು  ಕೇರಳ ರಾಜ್ಯಕ್ಕೆ ಧನ ಸಹಾಯ ನೀಡಿದ್ದಾರೆ.

ಸೇನೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದೊಂದಿಗೆ ಕೇಂದ್ರಸರ್ಕಾರ ಕೂಡಾ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೆ.  ಶನಿವಾರ ವೈಮಾನಿಕ ಪರೀಕ್ಷೆ ನಡೆಸಿದ ಪ್ರಧಾನಿ ನರೇಂದ್ರಮೋದಿ 500 ಕೋಟಿ ರೂಪಾಯಿ ನೆರವು ಘೋಷಿಸಿದ್ದರು. ನಂತರ  ಹೆಚ್ಚುವರಿಯಾಗಿ 100 ಕೋಟಿ ಹಣವನ್ನು  ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ.

ಶತಮಾನಗಳಲ್ಲಿಯೇ ಅತ್ಯಂತ ಭೀಕರವಾದ ಪ್ರವಾಹ ಕೇರಳದಲ್ಲಿ ಉಂಟಾಗಿ 357 ಜನರನ್ನು ಬಲಿತೆಗೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT