ಸಾಂದರ್ಭಿಕ ಚಿತ್ರ 
ದೇಶ

ಕೇರಳ ಪ್ರವಾಹ: ನೀರಿನಲ್ಲಿ ಕೊಚ್ಚಿಹೋದ ಶಾಲಾ ದಾಖಲೆಗಳು, ವಿದ್ಯಾರ್ಥಿ ಆತ್ಮಹತ್ಯೆ

12 ನೇ ತರಗತಿಯ ದಾಖಲೆಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದರಿಂದ ಮನನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಝಿಕೋಡು: 12 ನೇ ತರಗತಿಯ  ದಾಖಲೆಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದರಿಂದ ಮನನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೈಲಾಶ್ (19 ) ಮೃತ ವಿದ್ಯಾರ್ಥಿ. ಕೊಝಿಕೋಡು ಜಿಲ್ಲೆಯ ಕಾರಂತೂರಿನವರಾದ ಈತನ ಮನೆ ನೀರಿನಲ್ಲಿ ಆವೃತ್ತವಾಗಿದ್ದರಿಂದ ಮೂರು ದಿನಗಳಿಂದ  ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದರು.

ಐಟಿಐಗೆ  ದಾಖಲಾಗಿದ್ದ ಕೈಲಾಶ್   ಉನ್ನತ ಶಿಕ್ಷಣಕ್ಕಾಗಿ ಸ್ವಲ್ಪ ಹಣ ಕೊಡಿಟ್ಟ ಜೊತೆಗೆ ಹೊಸ ಬಟ್ಟೆಯನ್ನು ಖರೀದಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ನಿನ್ನೆ ದಿನ ಭಾರೀ ಮಳೆಯಿಂದಾಗಿ ಆತನ ಮನೆ ನೀರಿನಿಂದ ಆವೃತ್ತಗೊಂಡಿದ್ದು, ನೀರಿನಲ್ಲಿ ಶಾಲಾ ದಾಖಲೆಗಳು ಕೊಚ್ಚಿಕೊಂಡು ಹೋಗಿವೆ. ಮಳೆ ನಿಂತ ಮೇಲೆ ಮನೆ ಸ್ವಚ್ಛಗೊಳಿಸುವಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಪೋಷಕರ ಗಮನಕ್ಕೆ ಬಂದಿದೆ ಎಂದು ಕುನ್ನಮಂಗಲಂ ಠಾಣೆ  ಅಧಿಕಾರಿ ತಿಳಿಸಿದ್ದಾರೆ.

ಕೈಲಾಶ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ ಪೋಷಕರು ಕಂಗಲಾಗಿದ್ದಾರೆ.  ತನ್ನೆಲ್ಲಾ ಕನಸುಗಳು ನೀರಿನಲ್ಲಿ ಕೊಚ್ಚಿಹೋದ ಭಾವಿಸಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು  ಪೋಷಕರು ಅಳಲು ತೋಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?