ಪಾಕ್ ಸೇನಾ ಮುಖ್ಯಸ್ಥರನ್ನು ಆಲಂಗಿಸಿದ್ದ ನವಜೋತ್ ಸಿಂಗ್ ಸಿದು 
ದೇಶ

ಪಾಕ್ ಸೇನಾ ಮುಖ್ಯಸ್ಥರ ಆಲಿಂಗನ; ನವಜೋತ್ ಸಿಂಗ್ ಸಿದು ವಿರುದ್ಧ ಕೇಸು ದಾಖಲು

ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಸರ್ಕಾರದ ಪ್ರವಾಸೋದ್ಯಮ ಸಚಿವ ...

ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಸರ್ಕಾರದ ಪ್ರವಾಸೋದ್ಯಮ ಸಚಿವ ನವಜೋದ್ ಸಿಂಗ್ ಸಿದು ವಿರುದ್ಧ ಬಿಹಾರದ ಮುಜಾಫರ್ ಪುರ ನ್ಯಾಯಾಲಯದಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅಲ್ಲಿನ ಸೇನಾ ಮುಖ್ಯಸ್ಥರನ್ನು ಆಲಂಗಿಸಿಕೊಳ್ಳುವ ಮೂಲಕ ಭಾರತೀಯ ಸೇನೆಗೆ ಸಿದು ಅವಮಾನ ಮಾಡಿದ್ದಾರೆ ಎಂದು ಕೇಸು ದಾಖಲಾಗಿದೆ.

ನ್ಯಾಯವಾದಿ ಸುಧೀರ್ ಒಜ್ಹ ಮುಜಾಫರ್ ಪುರ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಕೇಸು ದಾಖಲಿಸಿದ್ದಾರೆ. ದೇಶದ್ರೋಹ ಕಾನೂನಿನಡಿಯಲ್ಲಿ ಸಚಿವ ಸಿಧು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಒಜ್ಹಾ ತಿಳಿಸಿದ್ದಾರೆ.

ಸಿಧು ಅವರ ಸನ್ನೆ ಮತ್ತು ನಡವಳಿಕೆಯಿಂದ ಭಾರತೀಯರಿಗೆ ನೋವಾಗಿದೆ ಎಂದು ಹೇಳಿರುವ ಅವರು, ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ವಾರ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇನ್ನು, ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಆಲಿಂಗನ ಮಾಡಿದ್ದ ತನ್ನ ಸಂಪುಟ ಸಹೋದ್ಯೋಗಿ ವಿರುದ್ಧ ನಿನ್ನೆ ಹರಿಹಾಯ್ದಿದ್ದ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪಾಕ್ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಮೇಲೆ ಸಿದು ಒಲವು  ತೋರಿಸಬಾರದಿತ್ತು ಎಂದು ಹೇಳಿದ್ದಾರೆ.

ಪ್ರತಿದಿನ ನಮ್ಮ ಸೈನಿಕರು ಹುತಾತ್ಮರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಲ್ಲಿನ ಸೇನಾ ಮುಖ್ಯಸ್ಥರನ್ನು ಆಲಿಂಗನ ಮಾಡುವುದು ಸರಿಯಲ್ಲ, ಅದನ್ನು ನವಜೋತ್ ಸಿಂಗ್ ಸಿಧು ಅರ್ಥ ಮಾಡಿಕೊಳ್ಳಬೇಕಾಗಿತ್ತು ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT