ರವಿಶಂಕರ್ ಪ್ರಸಾದ್ - ಕ್ರಿಸ್ ಡೇನಿಲ್ಸ್ 
ದೇಶ

ನಕಲಿ ಸಂದೇಶಗಳ ಮೂಲ ಪತ್ತೆಹಚ್ಚಲು ಪರಿಹಾರ ಕಂಡುಕೊಳ್ಳಿ: ವಾಟ್ಸ್ ಅಪ್ ಗೆ ಕೇಂದ್ರ ಸೂಚನೆ

ನಕಲಿ ಹಾಗೂ ಪ್ರಚೋದನಕಾರಿ ವಾಟ್ಸ್ ಅಪ್ ಸಂದೇಶಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ...

ನವದೆಹಲಿ: ನಕಲಿ ಹಾಗೂ ಪ್ರಚೋದನಕಾರಿ ವಾಟ್ಸ್ ಅಪ್ ಸಂದೇಶಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ, ನಕಲಿ ಸಂದೇಶಗಳ ಮೂಲ ಪತ್ತೆಹಚ್ಚಲು ತಾಂತ್ರಿಕ ಪರಿಹಾರ ಕಂಡುಕೊಳ್ಳಿ ಎಂದು ವಾಟ್ಸ್ ಅಪ್ ಸಂಸ್ಥೆಗೆ ಸೂಚಿಸಿದೆ.
ವಾಟ್ಸ್ ಅಪ್ ಮುಖ್ಯಸ್ಥ ಕ್ರಿಸ್ ಡೇನಿಲ್ಸ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು, ಫೇಸ್ ಬುಕ್ ಮಾಲೀಕತ್ವದ ವಾಟ್ಸ್ ಅಪ್ ಭಾರತದ ಡಿಜಿಟಲ್ ವ್ಯವಸ್ಥೆಗೆ ಸಾಕಷ್ಟು ಕೊಡುಗೆ ನೀಡಿದೆ. ಆದರೆ ಗುಂಪು ಹತ್ಯೆಗೆ ಪ್ರಚೋದನೆ ಮತ್ತು ಸೇಡಿನ ಅಶ್ಲೀಲತೆಯಂತಹ ಕೆಟ್ಟ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕು ಎಂದಿದ್ದಾರೆ.
ಕ್ರಿಸ್ ಡೇನಿಲ್ಸ್ ಅವರೊಂದಿಗಿನ ಮಾತುಕತೆ ಫಲಪ್ರದವಾಗಿದೆ. ನಕಲಿ ಸಂದೇಶಗಳ ಮೂಲ ಪತ್ತೆಹಚ್ಚಲು ಪರಿಹಾರ ಕಂಡುಕೊಳ್ಳುವಂತೆ, ಸ್ಥಳೀಯ ಕಚೇರಿ ಸ್ಥಾಪಿಸುವಂತೆ ಹಾಗೂ ಭಾರತದ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ವಾಟ್ಸ್ ಅಪ್ ಸಿಇಒಗೆ ಸೂಚಿಸಲಾಗಿದೆ ಎಂದರು.
ಇತ್ತೀಚಿಗಷ್ಟೇ ಸುಳ್ಳು ಮತ್ತು ಪ್ರಚೋದನಾತ್ಮಕ ಮೆಸೇಜ್ ಗಳಿಗೆ ಕಡಿವಾಣ ಹಾಕುತ್ತಿಲ್ಲ ಎಂದು ವಾಟ್ಸ್ ಅಪ್ ಬಗ್ಗೆ ಕೇಂದ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ವಾಟ್ಸ್ ಅಪ್ ಫಾರ್ವಡ್ ಮೆಸೇಜ್ ಗೆ ಮಿತಿ ವಿಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT