ಸಂಗ್ರಹ ಚಿತ್ರ 
ದೇಶ

ಕೇರಳ ಪ್ರವಾಹ: ರಾಷ್ಟ್ರಪತಿ, ಪ್ರಧಾನಿಗೆ ರಷ್ಯಾ ಅಧ್ಯಕ್ಷ ಪತ್ರ, ಸಂತಾಪ ಸೂಚನೆ

ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಉಂತಾಗಿ ಭಾರೀ ಹಾನಿಯಾಗಿರುವ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು....

ತಿರುವನಂತಪುರಂ: ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಉಂತಾಗಿ ಭಾರೀ ಹಾನಿಯಾಗಿರುವ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಕೇರಳ ನೆರೆ, ಪ್ರವಾಹದಲ್ಲಿ ಸಾವನ್ನಪ್ಪಿರುವವರ ಬಗೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ವಪಕ್ಷ ಸಭೆ ಕರೆದಿದ್ದಾರೆ. ಮಂಗಳವಾರ ಸಂಜೆ ನಾಲ್ಕಕ್ಕೆ ಸಭೆ ನಡೆಯಲಿದೆ.
ಕೇಂದ್ರ ಸರ್ಕಾರ ಸೋಮವಾರದಂದು ಕೇರಳ ಪ್ರವಾಹವನ್ನು ಗಂಬೀರ ಸ್ವರೂಪದ ದುರಂತ ಎಂದು ಪರಿಗಣಿಸುವುದಾಗಿ ಕೇರಳ ಹೈಕೋರ್ಟ್ ಗೆ ತಿಳಿಸಿದೆ. ಆದರೆ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಯಾವ ನಿಬಂಧಗಳಿಲ್ಲ ಎಂದು ಸರ್ಕಾರ ಹೇಳಿಕೆ ನಿಡಿದೆ.
'ರಾಷ್ಟ್ರೀಯ ವಿಕೋಪ' ಎಂಬ ಶಬ್ದವು ಸಾಮಾನ್ಯ ಮಾತಿನಲ್ಲಿ ಬಳಸಲ್ಪಡುವ ಅಭಿವ್ಯಕ್ತಿಯಾಗಿದೆ, ಎಂದು ಭಾರತದ ಸಹಾಯಕ ಸಾಲಿಸಿಟರ್ ಜನರಲ್ ಎನ್.ನಾಗರೇಶ್ ಹೈಕೋರ್ಟ್ ಗೆ ತಿಳಿಸಿದ್ದಾರೆ.
ಅಧಿಕೃತ ಅಂಕಿ ಅಂಶಗಳ ಪ್ರಕಾರ ಆಗಸ್ಟ್ 8 ರಂದು ಪ್ರಾರಂಭವಾದ ಮಾನ್ಸೂನ್ ಮಳೆಯಿಂದಾಗಿ ಕೇರಳದಲ್ಲಿ ಇದುವರೆಗೆ 223 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT