ಸಿಧು ತಲೆಗೆ 5 ಲಕ್ಷ ರೂಪಾಯಿ ಘೋಷಿಸಿದ ರಾಷ್ಟ್ರೀಯ ಬಜರಂಗ್ ದಳ 
ದೇಶ

ಸಿಧು ತಲೆಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ರಾಷ್ಟ್ರೀಯ ಬಜರಂಗ್ ದಳ

ಪ್ರವೀಣ್ ತೊಗಾಡಿಯಾ ಅವರ ರಾಷ್ಟ್ರೀಯ ಬಜರಂಗ ದಳ ಪಂಜಾಬ್ ನ ಸಚಿವ ನವಜೋತ್ ಸಿಂಗ್ ಸಿಧು ಅವರ ತಲೆಗೆ 5 ಲಕ್ಷ ರೂಪಾಯಿ ಘೋಷಣೆ ಮಾಡಿದೆ.

ಲಖನೌ: ಪ್ರವೀಣ್ ತೊಗಾಡಿಯಾ ಅವರ ರಾಷ್ಟ್ರೀಯ ಬಜರಂಗ ದಳ ಪಂಜಾಬ್ ನ ಸಚಿವ ನವಜೋತ್ ಸಿಂಗ್ ಸಿಧು ಅವರ ತಲೆಗೆ 5 ಲಕ್ಷ ರೂಪಾಯಿ ಘೋಷಣೆ ಮಾಡಿದೆ. 
ರಾಷ್ಟ್ರೀಯ ಬಜರಂಗ ದಳದ ಆಗ್ರಾ ಜಿಲ್ಲಾಧ್ಯಕ್ಷ ಸಂಜಯ್ ಜಾಟ್ ಈ ಘೋಷಣೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದು, ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಆಲಿಂಗನ ಮಾಡಿದ ಸಿಧು ಶಿರಚ್ಛೇಧ ಮಾಡಿದವರಿಗೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. 
ಸಿಧು ಪಾಕ್ ಸೇನಾ ಮುಖ್ಯಸ್ಥರನ್ನು ಆಲಿಂಗನ ಮಾಡಿಕೊಂಡಿದ್ದಕ್ಕೆ ಸ್ವತಃ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿಧು ನಡೆ ಅಕ್ಷಮ್ಯವಾದದ್ದು, ಸಿಧು ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಬೇಕು, ಗುರುಗೋವಿಂದ್ ಸಿಂಗ್ ಅವರ ಬೋಧನೆಗಳನ್ನು ಸಿಧು ಮರೆತಿದ್ದಾರೆ. ನಮ್ಮ ಯೋಧರನ್ನು ಹತ್ಯೆ ಮಾಡುತ್ತಿರುವ ಪಾಕ್ ಸೇನೆಯ ಯೋಧರ ಮುಖ್ಯಸ್ಥರನ್ನು ಆಲಿಂಗನ ಹೇಗೆ ಸಾಧ್ಯ? ಎಂದು ಬಜರಂಗ ದಳ ಅಧ್ಯಕ್ಷ ಪ್ರಶ್ನಿಸಿದ್ದಾರೆ. 
ಆಗ್ರಾಗೆ ಸಿಧು ಬಂದರೆ ಅವರಿಗೆ ಚಪ್ಪಲಿ ಹಾರ ಹಾಕುತ್ತಾರೆ ಎಂದು ಸಂಜಯ್ ಜಾಟ್ ಹೇಳಿದ್ದು, ಸಿಧು ಅವರ ಶಿರಚ್ಛೇಧ ಮಾಡಿದರೆ 5 ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT