ಜಮ್ಮು ಕಾಶ್ಮೀರ, ಉತ್ತರಾಖಂಡ್ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: 
ದೇಶ

ಜಮ್ಮು ಕಾಶ್ಮೀರ, ಉತ್ತರಾಖಂಡ್ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ:

ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಕಾಶ್ಮೀರ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶಿಸಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಕಾಶ್ಮೀರ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶಿಸಿದ್ದಾರೆ.
ಪ್ರಸ್ತುತ ಬಿಹಾರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಜಮ್ಮು ಕಾಶ್ಮೀರದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಮಲಿಕ್ ಇದುವರೆಗೆ ಕಾಶ್ಮೀರ ರಾಜ್ಯಪಾಲರಾಗಿದ್ದ ಎನ್.ಎನ್. ವೋಹ್ರಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಇದೇ ವೇಳೆ ಮಲಿಕ್ ಅವರಿಂದ ತೆರವಾದ ಸ್ಥಾನಕ್ಕೆ ಹಿರಿಯ ಬಿಜೆಪಿ ಮುಖಂಡ ಲಾಲ್ ಜೀ ಟಂಡನ್ ಅವರನ್ನು ನೇಮಕ ಮಾಡಲಾಗಿದ್ದು ಟಂಡನ್ ಬಿಹಾರದ ನೂತನ ರಾಜ್ಯಪಾಲರಾಗಿದ್ದಾರೆ.
ಇದರೊಡನೆಯೇ ಬೇಬಿ ರಾಣಿ ಮೌರ್ಯ ಉತ್ತರಾಖಂಡದ ಹೊಸ ರಾಜ್ಯಪಾಲರಾಗಿ ಆಯ್ಕೆಯಾದರೆ ಹರಿಯಾಣದ ರಾಜ್ಯಪಾಲ ಕಫ್ತಾನ್ ಸಿಂಗ್ ಸೋಲಂಕಿ ಅವರನ್ನು ತ್ರಿಪುರಾಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ತ್ರಿಪುರಾ ರಾಜ್ಯಪಾಲರಾಗಿದ್ದ ತಥಾಗಥ ರಾಯ್ ಅವರನ್ನು ಮೇಘಾಲಯಕ್ಕೆ  ವರ್ಗಾವಣೆ ಮಾಡಲಾಗಿದ್ದು ಪ್ರಸಕ್ತ ಮೇಘಾಲಯ ರಾಜ್ಯಪಾಲರಾಗಿದ್ದ  ಗಂಗಾ ಪ್ರಸಾದ್`ಅವರನ್ನು ಸಿಕ್ಕಿಂ ಗೆ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT