ಜಮ್ಮು ಕಾಶ್ಮೀರ, ಉತ್ತರಾಖಂಡ್ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: 
ದೇಶ

ಜಮ್ಮು ಕಾಶ್ಮೀರ, ಉತ್ತರಾಖಂಡ್ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ:

ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಕಾಶ್ಮೀರ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶಿಸಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಜಮ್ಮು ಕಾಶ್ಮೀರ ಸೇರಿ ಹಲವು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಿ ಆದೇಶಿಸಿದ್ದಾರೆ.
ಪ್ರಸ್ತುತ ಬಿಹಾರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಜಮ್ಮು ಕಾಶ್ಮೀರದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಮಲಿಕ್ ಇದುವರೆಗೆ ಕಾಶ್ಮೀರ ರಾಜ್ಯಪಾಲರಾಗಿದ್ದ ಎನ್.ಎನ್. ವೋಹ್ರಾ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಇದೇ ವೇಳೆ ಮಲಿಕ್ ಅವರಿಂದ ತೆರವಾದ ಸ್ಥಾನಕ್ಕೆ ಹಿರಿಯ ಬಿಜೆಪಿ ಮುಖಂಡ ಲಾಲ್ ಜೀ ಟಂಡನ್ ಅವರನ್ನು ನೇಮಕ ಮಾಡಲಾಗಿದ್ದು ಟಂಡನ್ ಬಿಹಾರದ ನೂತನ ರಾಜ್ಯಪಾಲರಾಗಿದ್ದಾರೆ.
ಇದರೊಡನೆಯೇ ಬೇಬಿ ರಾಣಿ ಮೌರ್ಯ ಉತ್ತರಾಖಂಡದ ಹೊಸ ರಾಜ್ಯಪಾಲರಾಗಿ ಆಯ್ಕೆಯಾದರೆ ಹರಿಯಾಣದ ರಾಜ್ಯಪಾಲ ಕಫ್ತಾನ್ ಸಿಂಗ್ ಸೋಲಂಕಿ ಅವರನ್ನು ತ್ರಿಪುರಾಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ತ್ರಿಪುರಾ ರಾಜ್ಯಪಾಲರಾಗಿದ್ದ ತಥಾಗಥ ರಾಯ್ ಅವರನ್ನು ಮೇಘಾಲಯಕ್ಕೆ  ವರ್ಗಾವಣೆ ಮಾಡಲಾಗಿದ್ದು ಪ್ರಸಕ್ತ ಮೇಘಾಲಯ ರಾಜ್ಯಪಾಲರಾಗಿದ್ದ  ಗಂಗಾ ಪ್ರಸಾದ್`ಅವರನ್ನು ಸಿಕ್ಕಿಂ ಗೆ ವರ್ಗಾವಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!