ಫಾರೂಖ್ ಅಬ್ದುಲ್ಲಾ 
ದೇಶ

ಈದ್ ಪ್ರಾರ್ಥನೆ ವೇಳೆ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ಫಾರೂಖ್ ಅಬ್ದುಲ್ಲಾ ಮೇಲೆ ಶೂ ಎಸೆತ!

ಜಮ್ಮು-ಕಾಶ್ಮೀರದಲ್ಲಿ ಈದ್ ಪ್ರಾರ್ಥನೆ ವೇಳೆ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ವಿರುದ್ಧ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಈದ್ ಪ್ರಾರ್ಥನೆ ವೇಳೆ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ವಿರುದ್ಧ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. 
ಶ್ರೀನಗರದ ಹಜ್ರತ್ಬಾಲ್ ಮಸೀದಿಯಲ್ಲಿ ಈದ್ ಅಂಗವಾಗಿ ನಡೆದ ಪ್ರಾರ್ಥನೆ ವೇಳೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ ಫಾರೂಖ್ ಅಬ್ದುಲ್ಲಾ ವಿರುದ್ಧ ವಾಗ್ದಾಳಿಗಳು ನಡೆದಿದೆ. ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ಆಕ್ರೋಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಾರೂಖ್ ಅಬ್ದುಲ್ಲಾ, "ದೇಶ ಬದಲಾವಣೆಯಾಗಬೇಕಿದೆ, ನಾನು ಶಾಂತಿ ಮತ್ತು ಸೌಹಾರ್ದತೆಯ ಸಂದೇಶವನ್ನು ತಲುಪಿಸಲು ಬಯಸುತ್ತೇನೆ ಎಂದು ಖಾಸಗಿ ಸುದ್ದಿ ವಾಹಿನಿಗೆ ಹೇಳಿದಾರೆ. 
ಶಾಂತಿಯನ್ನು ಕದಡಲು, ವಿರೋಧಿಸುವುದಕ್ಕಾಗಿಯೇ ಕೆಲವರು ಇದ್ದಾರೆ, ಆದರೆ ನಾವು ಶಾಂತಿ ಸೌಹಾರ್ದತೆಗಾಗಿ ಪ್ರಯತ್ನಿಸುತ್ತಲೇ ಇರಬೇಕಾಗುತ್ತದೆ, ನನ್ನ ರಾಜ್ಯದ ಜನತೆ ಇನ್ನೂ ಎಷ್ಟು ಸಮಸ್ಯೆಗಳನ್ನು ಎದುರಿಸಬೇಕು? ಇಡೀ ದೇಶವೇ ಅಭಿವೃದ್ಧಿ ಕಾಣುತ್ತಿರುವಾಗ ನಾವೂ ಅದರ ಜೊತೆ ಹೆಜ್ಜೆ ಹಾಕಬೇಕಾಗುತ್ತದೆ ಎಂದು ಹೇಳಿದ್ದಾರೆ. 
ಮಸೀದಿಯಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದಕ್ಕಾಗಿ ಫಾರೂಕ್ ಅಬ್ದುಲ್ಲಾ ಮೇಲೆ ಶೂ ಎಸೆದಿರುವ ಘಟನೆ ನಡೆದಿದ್ದು, ಫಾರೂಕ್ ಅಬ್ದುಲ್ಲಾ ಅನಿವಾರ್ಯವಾಗಿ ಆ ಪ್ರದೇಶದಿಂದ ಹೊರನಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT