ಸ್ಫೋಟ ಸಂಭವಿಸಿದ ಪ್ರದೇಶ 
ದೇಶ

ಪಶ್ಚಿಮ ಬಂಗಾಳ: ಟಿಎಂಸಿ ಕಚೇರಿ ಬಳಿ ಸ್ಫೋಟ; ಒಬ್ಬರ ಸಾವು, ಐವರಿಗೆ ಗಾಯ

ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರ ಜಿಲ್ಲೆಯ ಮ್ಯಾಕ್ರಾಮ್ ಪುರ ದಲ್ಲಿನ ತೃಣಮೂಲಕ ಕಾಂಗ್ರೆಸ್ ಕಚೇರಿ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಮಿಡ್ನಾಪುರ : ಪಶ್ಚಿಮ ಬಂಗಾಳ ರಾಜ್ಯದ ಮಿಡ್ನಾಪುರ ಜಿಲ್ಲೆಯ ಮ್ಯಾಕ್ರಾಮ್ ಪುರ ದಲ್ಲಿನ ತೃಣಮೂಲಕ ಕಾಂಗ್ರೆಸ್ ಕಚೇರಿ ಬಳಿ ಇಂದು ಸಂಭವಿಸಿದ ಸ್ಫೋಟದಲ್ಲಿ  ಒಬ್ಬರು ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟ  ಹಾಗೂ ಗಾಯಾಳುಗಳ  ಪರಿಚಯ ತಿಳಿದುಬಂದಿಲ್ಲ. ಸ್ಟೋಟದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಪೊಲೀಸರು  ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ  ಒದಗಿಸಿದ್ದಾರೆ.

ಕಚ್ಚಾ ಬಾಂಬ್ ಸ್ಫೋಟಗೊಂಡಿದೆಯೆ ಅಥವಾ ಪಕ್ಷದ ಕಚೇರಿಯಲ್ಲಿ ಗ್ಯಾಸ್ ಸಿಲಿಂಡರ್  ಸಿಡಿದು ಘಟನೆ ಸಂಭವಿಸಿದೆಯೇ  ಎಂಬುದು ಕೂಡ ತಿಳಿದುಬಂದಿಲ್ಲ . ಸ್ಫೋಟದ ರಭಸಕ್ಕೆ  ಟಿಎಂಸಿ ಕಚೇರಿಯ ಗೋಡೆ ಧ್ವಂಸಗೊಂಡಿದೆ. ಏಕಾಏಕಿ ಸ್ಫೋಟ ಸಂಭವಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಧ್ಯಾಹ್ನದ ವರೆಗೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಾರಾಯಣ್ ಘರ್ ಟಿಎಂಸಿ ಶಾಸಕ ಪ್ರದ್ಯೂತ್ ಗೋಷ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT