ಸಂಗ್ರಹ ಚಿತ್ರ 
ದೇಶ

ಕಾಂಗ್ರೆಸ್ ರ್ಯಾಲಿಯಲ್ಲಿ ಸಿಲುಕಿದ ಆ್ಯಂಬುಲೇನ್ಸ್; ನವಜಾತ ಶಿಶು ಸಾವು, ಕೋಮಾಗೆ ಜಾರಿದ ತಾಯಿ!

ಕಾಂಗ್ರೆಸ್ ಕಾರ್ಯಕರ್ತರ ಸೈಕಲ್ ರ್ಯಾಲಿಯಿಂದಾಗಿ ನವಜಾತ ಶಿಶು ಸಾವನ್ನಪ್ಪಿದ್ದು ತಾಯಿ ಕೋಮಾಗೆ ಜಾರಿರುವ ಹೃದಯವಿದ್ರಾವಕ ಘಟನೆ ಸೋನಿಪತ್ ನಲ್ಲಿ ನಡೆದಿದೆ...

ಸೋನಿಪತ್(ಹರಿಯಾಣ): ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ತನ್ವಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸೈಕಲ್ ರ್ಯಾಲಿಯಿಂದಾಗಿ ನವಜಾತ ಶಿಶು ಸಾವನ್ನಪ್ಪಿದ್ದು ತಾಯಿ ಕೋಮಾಗೆ ಜಾರಿರುವ ಹೃದಯವಿದ್ರಾವಕ ಘಟನೆ ಸೋನಿಪತ್ ನಲ್ಲಿ ನಡೆದಿದೆ. 
ಎರಡು ದಿನಗಳ ಹಿಂದೆ ಮಗುವಿನ ಜನನವಾಗಿತ್ತು. ಆದರೆ ನವಜಾತ ಶಿಶುವಿನ ಪರಿಸ್ಥಿತಿ ಗಂಭೀರವಾಗಿದ್ದರಿಂದ ಕುಟುಂಬಸ್ಥರು ತಾಯಿ ಮತ್ತು ಮಗುವನ್ನು ಆ್ಯಂಬುಲೇನ್ಸ್ ನಲ್ಲಿ ಸೋನಿಪತ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರುವಾಗ ಕಾಂಗ್ರೆಸ್ ನ ಸೈಕಲ್ ರ್ಯಾಲಿ ಮಧ್ಯೆ ಸಿಕ್ಕಿಹಾಕಿಕೊಂಡಿದ್ದಾರೆ. 
ಸೈಕಲ್ ರ್ಯಾಲಿಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ 30 ನಿಮಿಷಗಳ ಕಾಲ ಆ್ಯಂಬುಲೇನ್ಸ್ ರ್ಯಾಲಿ ಮಧ್ಯೆ ಸಿಕ್ಕಿಹಾಕಿಕೊಂಡಿದ್ದರಿಂದ ನವಜಾತ ಶಿಶುವಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರೆಯದ ಕಾರಣ ಮೃತಪಟ್ಟಿದ್ದು ತಾಯಿ ಕೋಮಾಗೆ ಜಾರಿದ್ದಾರೆ. 
ಅಶೋಕ್ ತನ್ವಾರ್ ಹರಿಯಾಣ ಬಜಾವೋ ಪರಿವರ್ತನ್ ಲಾವೋ ಅಭಿಯಾನ ಆರಂಭಿಸಿದ್ದು ಸೈಕಲ್ ರ್ಯಾಲಿಗೆ ಕರೆ ನೀಡಿದ್ದರು. ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 1ನ್ನು ಬ್ಲಾಕ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT