ಯಶವಂತ್ ಸಿನ್ಹಾ 
ದೇಶ

ವಿದೇಶದಲ್ಲಿ ಭಾರತದ ಟೀಕೆ ಪ್ರಾರಂಭಿಸಿದ್ದು ಪ್ರಧಾನಿ, ಅದನ್ನು ಅನುಸರಿಸಬೇಡಿ: ಯಶವಂತ್ ಸಿನ್ಹಾ

ನಮ್ಮ ಆಂತರಿಕ ವಿಷಯಗಳನ್ನು ವಿದೇಶಗಳಿಗೆ ಹೋಗಿ ಚರ್ಚಿಸಬಾರದು, ಪ್ರಧಾನಿಯವರು ಈ ...

ನವದೆಹಲಿ: ನಮ್ಮ ಆಂತರಿಕ ವಿಷಯಗಳನ್ನು ವಿದೇಶಗಳಿಗೆ ಹೋಗಿ ಚರ್ಚಿಸಬಾರದು, ಪ್ರಧಾನಿಯವರು ಈ ನಿಯಮವನ್ನು ಮೊದಲ ಬಾರಿಗೆ ಮುರಿದರು. ಬೇರೆಯವರು ಅವರನ್ನು ಅನುಸರಿಸಬೇಕಾಗಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಜರ್ಮನಿಯ ಹ್ಯಾಮ್ ಬರ್ಗ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಭಾಷಣಕ್ಕೆ ಉಲ್ಲೇಖವಾಗಿ ಯಶವಂತ್ ಸಿನ್ಹಾ ಅವರ ಈ ಟ್ವೀಟ್ ಇದೆ. ಅಲ್ಲ ಅವರು ಸಾಮೂಹಿಕ ಹತ್ಯೆ ಮತ್ತು ಅನಾಣ್ಯೀಕರಣದ ಕುರಿತು ಮಾತನಾಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಿನ್ನೆ ಜರ್ಮನಿಯ ಹ್ಯಾಮ್ ಬರ್ಗ್ ನ ಶಾಲೆಯೊಂದರಲ್ಲಿ ಸಂವಾದ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿಯವರ ನೋಟುಗಳ ಅನಾಣ್ಯೀಕರಣ ಮತ್ತು ಅದರಿಂದ ಉಂಟಾದ ಹಾನಿಯ ಬಗ್ಗೆ ಟೀಕಿಸಿದ್ದರು. ಈ ಬಗ್ಗೆ ಯಶವಂತ್ ಸಿನ್ಹಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

2015ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಮನ್ ನ ರಾಜಧಾನಿ ಮಸ್ಕತ್ ನ ಸುಲ್ತಾನ್ ಖಬೂಸ್ ಸ್ಟೇಡಿಯಂನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡುತ್ತಾ, ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಲವು ಹಗರಣಗಳನ್ನು ಮಾಡಿ ದೇಶಕ್ಕೆ ಕೆಟ್ಟ ಹೆಸರು ತಂದಿದೆ ಎಂದು ಟೀಕಿಸಿದ್ದರು. ಯಾರೂ ಕೂಡ ನನ್ನ ಸರ್ಕಾರ ಭ್ರಷ್ಟವಾಗಿದೆ ಎಂದು ಟೀಕಿಸಬಾರದು ಎಂದಿದ್ದರು.

ನಂತರ ಅದೇ ವರ್ಷ ಕೆನಡಾದಲ್ಲಿ ಇನ್ನು ಮುಂದೆ ಭಾರತ ಸ್ಕಿಲ್ ಇಂಡಿಯಾ ಎಂದು ಕರೆಯಲ್ಪಡುತ್ತದೆಯೇ ಹೊರತು ಸ್ಕ್ಯಾಮ್ ಇಂಡಿಯಾ ಎಂದಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT