ಮುಲ್ಲಪೆರಿಯಾರ್ ಜಲಾಶಯ 
ದೇಶ

ಮುಲ್ಲಪೆರಿಯಾರ್ ಡ್ಯಾಂ ನೀರಿನ ಮಟ್ಟ 139 ಅಡಿ ಇರಲಿ: ಸುಪ್ರೀಂ; ಅದರಿಂದ ಪ್ರವಾಹವಾಗಿಲ್ಲ: ತಮಿಳುನಾಡು ಸಿಎಂ

ಕೇರಳ ಪ್ರವಾಹವನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 31 ರವರೆಗೂ ತಮಿಳುನಾಡಿನ ಮುಲ್ಲಪೆರಿಯಾರ್ ಜಲಾಶಯದಲ್ಲಿ 139 ಅಡಿಯವರೆಗೂ ನೀರು ಇರುವಂತೆ ನಿರ್ವಹಣೆ ಮಾಡುವಂತೆ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿದೆ.

ನವದೆಹಲಿ: ಕೇರಳ ಪ್ರವಾಹವನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 31 ರವರೆಗೂ ತಮಿಳುನಾಡಿನ ಮುಲ್ಲಪೆರಿಯಾರ್ ಜಲಾಶಯದಲ್ಲಿ 139 ಅಡಿಯವರೆಗೂ ನೀರು ಇರುವಂತೆ ನಿರ್ವಹಣೆ ಮಾಡುವಂತೆ ಸುಪ್ರೀಂಕೋರ್ಟ್ ಇಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಮುಲ್ಲಪೆರಿಯಾರ್ ಡ್ಯಾಂ ಉಪಸಮಿತಿ ಸಭೆಯಲ್ಲಿನ ಮಾಹಿತಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ. ಖನ್ವೀಲ್ ಕರ್ ಮತ್ತು ಡಿ. ವೈ. ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠ, ಜಲಾಶಯದಲ್ಲಿನ ನೀರಿನ ಮಟ್ಟ 139 ಅಡಿಯವರೆಗೂ ಇರುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದೆ.
ಇದು ಸುಪ್ರೀಂ ಕೋರ್ಟ್ ನಿಂದ ನಿಗದಿಪಡಿಸಲಾದ ಅನುಮತಿ ಮಿತಿಗಿಂತ ಎರಡು ಅಡಿಗಳಷ್ಟು ಕಡಿಮೆ ಇದೆ. ವಿಪತ್ತು ನಿರ್ವಹಣೆಯ ಅಂಶಕ್ಕೆ ಅದು ಸ್ವತಃ ಸೀಮಿತವಾಗಲಿದೆ ಎಂದು ಪೀಠ ಸ್ಪಷ್ಪಪಡಿಸಿದ್ದು, ಕೇರಳಕ್ಕೆ ವಿನಾಶಕಾರಿ ಪ್ರವಾಹ ಬಾರದಿರಲಿ ಎಂಬ ದೃಷ್ಟಿಯಲ್ಲಿ ಜಲಾಶಯದಲ್ಲಿನ ನೀರಿನ ಮಟ್ಟವನ್ನು ಕಡಿಮೆಗೊಳಿಸಿ ಆದೇಶ ನೀಡಲಾಗಿದೆ ಎಂದು ಹೇಳಿದೆ.
ಕೇರಳ ಆರೋಪ ತಳ್ಳಿಹಾಕಿದ ತಮಿಳುನಾಡು ಮುಖ್ಯಮಂತ್ರಿ
ಮುಲ್ಲಪೆರಿಯಾರ್ ಜಲಾಶಯದಿಂದ ನೀರು ಬಿಡುಗಡೆಯಾದ ಒಂದು ವಾರದ ನಂತರ ಕೇರಳದಲ್ಲಿ ಪ್ರವಾಹ ಉಂಟಾಗಿದೆ. ನೀರು 139, 141, ಮತ್ತು 142 ಅಡಿಯವರೆಗೂ ಇದ್ದಾಗ ಮೂರು ಹಂತದಲ್ಲಿ ಎಚ್ಚರಿಕೆಯಿಂದ ನೀರು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT