ಕೇರಳ ಪ್ರವಾಹ: ನೆರವನ್ನು ಇನ್ನೂ ಅಂತಿಮಗೊಳಿಸಿಲ್ಲ- ಯುಎಇ ಸ್ಪಷ್ಟನೆ 
ದೇಶ

ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ- ಯುಎಇ ಸ್ಪಷ್ಟನೆ

ಕೇರಳ ಪ್ರವಾಹ ಸಂತ್ರಸ್ತರಿಗೆ ಯುಎಇ ನೆರವು ನೀಡುವುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗಿತ್ತು. ಈಗ ಸ್ವತಃ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.

ನವದೆಹಲಿ: ಕೇರಳ ಪ್ರವಾಹ ಸಂತ್ರಸ್ತರಿಗೆ ಯುಎಇ ನೆರವು ನೀಡುವುದರ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗಿತ್ತು. ಈಗ ಸ್ವತಃ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. 
ಸಂತ್ರಸ್ತರಿಗೆ ನೆರವು ನೀಡುವುದರ ಸಂಬಂಧ ಪ್ರತಿಕ್ರಿಯೆ ನೀಡಿರುವ ದೆಹಲಿಯಲ್ಲಿನ ಯುಎಇ ರಾಯಭಾರಿ ಅಧಿಕಾರಿಕಾರಿಗಳು,  ಕೇರಳ ಪ್ರವಾಹ ಪರಿಹಾರಕ್ಕಾಗಿ ಯಾವುದೇ ರೀತಿಯ ನೆರವನ್ನೂ ಅಂತಿಮಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ. 
ಯುಎಇ ಅಧಿಕೃತವಾಗಿ ಕೇರಳಕ್ಕೆ ಆರ್ಥಿಕ ನೆರವನ್ನು ಘೋಷಿಸಿಲ್ಲ. ನೆರವಿಗೆ ಸಂಬಂಧಿಸಿದಂತೆ ಭಾರತ ಸರ್ಕಾರಕ್ಕೆ ನಾವು ಯಾವುದೇ ರೀತಿಯ ಮಾಹಿತಿಯನ್ನೂ ನೀಡಿಲ್ಲ.  ಆದರೆ ಕೇರಳ ಸಂತ್ರಸ್ತರಿಗೆ ಯಾವ ರೀತಿ ನೆರವು ನೀಡಬಹುದು ಎಂಬುದನ್ನು ಇನ್ನು ಕೆಲವೇ ದಿನಗಳಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕೇರಳದ ಸಂತ್ರಸ್ತರಿಗೆ ನೆರವು ನೀಡುವುದರ ಸಂಬಂಧ ಯುಎಇ ರಾಷ್ಟ್ರಮಟ್ಟದ ಸಮಿತಿಯೊಂದನ್ನು ರಚಿಸಿತ್ತು ಎಂದಷ್ಟೇ ಯುಎಇ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT