ಕಾಂತಿ ಮಿಶ್ರಾ 
ದೇಶ

ವಾಜಪೇಯಿಯವರು ದೇಶಕ್ಕೆ ಸೇರಿದ ವ್ಯಕ್ತಿ; ಸೋದರ ಸಂಬಂಧಿ ಕಾಂತಿ ಮಿಶ್ರಾ

ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ...

ಗ್ವಾಲಿಯರ್(ಮಧ್ಯ ಪ್ರದೇಶ): ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕಿ ಕರುಣಾ ಶುಕ್ಲಾ ಮಾಡಿರುವ ಆರೋಪವನ್ನು ವಾಜಪೇಯಿಯವರ ಮತ್ತೊಬ್ಬ ಸೋದರ ಸಂಬಂಧಿ ಕಾಂತಿ ಮಿಶ್ರಾ ನಿರಾಕರಿಸಿದ್ದಾರೆ.

ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಾಜಪೇಯಿಯವರು ನನಗೆ ಅಥವಾ ಕರುಣಾ ಅವರಿಗೆ ಸೇರಿದವರಲ್ಲ, ಅವರು ಇಡೀ ದೇಶಕ್ಕೆ ಸೇರಿದವರಾಗಿದ್ದಾರೆ. ಪ್ರತಿಯೊಬ್ಬರೂ ದೆಹಲಿಗೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಕಲಶ ತಮ್ಮ ರಾಜ್ಯಕ್ಕೆ ಬಂದಾಗ ಅಂತಿಮ ಗೌರವ ಸಲ್ಲಿಸಲು ಅನೇಕರಿಗೆ ಅವಕಾಶ ಸಿಗಬಹುದು ಎಂದಿದ್ದಾರೆ.
ಕರುಣಾ ಶುಕ್ಲ ಅವರ ಹೇಳಿಕೆಗೆ ಕಾಂತಿ ಮಿಶ್ರಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ವಾಜಪೇಯಿಯವರು ಕಳೆದ 16ರಂದು ನಿಧನರಾದ ನಂತರ ಅವರ ಚಿತಾಭಸ್ಮವನ್ನು ಬಿಜೆಪಿ ನಾಯಕರು ವಿವಿಧ ರಾಜ್ಯಗಳಿಗೆ ತೆಗೆದುಕೊಂಡು ಹೋಗಿ ನದಿಯಲ್ಲಿ ಬಿಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!