ಕಾಂತಿ ಮಿಶ್ರಾ 
ದೇಶ

ವಾಜಪೇಯಿಯವರು ದೇಶಕ್ಕೆ ಸೇರಿದ ವ್ಯಕ್ತಿ; ಸೋದರ ಸಂಬಂಧಿ ಕಾಂತಿ ಮಿಶ್ರಾ

ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ...

ಗ್ವಾಲಿಯರ್(ಮಧ್ಯ ಪ್ರದೇಶ): ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕಿ ಕರುಣಾ ಶುಕ್ಲಾ ಮಾಡಿರುವ ಆರೋಪವನ್ನು ವಾಜಪೇಯಿಯವರ ಮತ್ತೊಬ್ಬ ಸೋದರ ಸಂಬಂಧಿ ಕಾಂತಿ ಮಿಶ್ರಾ ನಿರಾಕರಿಸಿದ್ದಾರೆ.

ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಾಜಪೇಯಿಯವರು ನನಗೆ ಅಥವಾ ಕರುಣಾ ಅವರಿಗೆ ಸೇರಿದವರಲ್ಲ, ಅವರು ಇಡೀ ದೇಶಕ್ಕೆ ಸೇರಿದವರಾಗಿದ್ದಾರೆ. ಪ್ರತಿಯೊಬ್ಬರೂ ದೆಹಲಿಗೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಕಲಶ ತಮ್ಮ ರಾಜ್ಯಕ್ಕೆ ಬಂದಾಗ ಅಂತಿಮ ಗೌರವ ಸಲ್ಲಿಸಲು ಅನೇಕರಿಗೆ ಅವಕಾಶ ಸಿಗಬಹುದು ಎಂದಿದ್ದಾರೆ.
ಕರುಣಾ ಶುಕ್ಲ ಅವರ ಹೇಳಿಕೆಗೆ ಕಾಂತಿ ಮಿಶ್ರಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ವಾಜಪೇಯಿಯವರು ಕಳೆದ 16ರಂದು ನಿಧನರಾದ ನಂತರ ಅವರ ಚಿತಾಭಸ್ಮವನ್ನು ಬಿಜೆಪಿ ನಾಯಕರು ವಿವಿಧ ರಾಜ್ಯಗಳಿಗೆ ತೆಗೆದುಕೊಂಡು ಹೋಗಿ ನದಿಯಲ್ಲಿ ಬಿಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT