ಕಾಂತಿ ಮಿಶ್ರಾ 
ದೇಶ

ವಾಜಪೇಯಿಯವರು ದೇಶಕ್ಕೆ ಸೇರಿದ ವ್ಯಕ್ತಿ; ಸೋದರ ಸಂಬಂಧಿ ಕಾಂತಿ ಮಿಶ್ರಾ

ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ...

ಗ್ವಾಲಿಯರ್(ಮಧ್ಯ ಪ್ರದೇಶ): ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕಿ ಕರುಣಾ ಶುಕ್ಲಾ ಮಾಡಿರುವ ಆರೋಪವನ್ನು ವಾಜಪೇಯಿಯವರ ಮತ್ತೊಬ್ಬ ಸೋದರ ಸಂಬಂಧಿ ಕಾಂತಿ ಮಿಶ್ರಾ ನಿರಾಕರಿಸಿದ್ದಾರೆ.

ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಾಜಪೇಯಿಯವರು ನನಗೆ ಅಥವಾ ಕರುಣಾ ಅವರಿಗೆ ಸೇರಿದವರಲ್ಲ, ಅವರು ಇಡೀ ದೇಶಕ್ಕೆ ಸೇರಿದವರಾಗಿದ್ದಾರೆ. ಪ್ರತಿಯೊಬ್ಬರೂ ದೆಹಲಿಗೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಕಲಶ ತಮ್ಮ ರಾಜ್ಯಕ್ಕೆ ಬಂದಾಗ ಅಂತಿಮ ಗೌರವ ಸಲ್ಲಿಸಲು ಅನೇಕರಿಗೆ ಅವಕಾಶ ಸಿಗಬಹುದು ಎಂದಿದ್ದಾರೆ.
ಕರುಣಾ ಶುಕ್ಲ ಅವರ ಹೇಳಿಕೆಗೆ ಕಾಂತಿ ಮಿಶ್ರಾ ಈ ಪ್ರತಿಕ್ರಿಯೆ ನೀಡಿದ್ದಾರೆ.

ವಾಜಪೇಯಿಯವರು ಕಳೆದ 16ರಂದು ನಿಧನರಾದ ನಂತರ ಅವರ ಚಿತಾಭಸ್ಮವನ್ನು ಬಿಜೆಪಿ ನಾಯಕರು ವಿವಿಧ ರಾಜ್ಯಗಳಿಗೆ ತೆಗೆದುಕೊಂಡು ಹೋಗಿ ನದಿಯಲ್ಲಿ ಬಿಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT