ಸಂಗ್ರಹ ಚಿತ್ರ 
ದೇಶ

ಎಎಪಿ ಸರ್ಕಾರಿಂದ 20 ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರು. ಪರಿಹಾರ!

ಬಿಎಸ್ಎಫ್, ದೆಹಲಿ ಪೊಲೀಸ್ ಮತ್ತು ದೆಹಲಿ ಅಗ್ನಿಶಾಮಕ ದಳದ 20 ಹುತಾತ್ಮ ಕುಟುಂಬಕ್ಕೆ ತಲಾ 1 ಕೋಟಿ ರುಪಾಯಿ ಪರಿಹಾರ ನೀಡಲು ಆಮ್ ಆದ್ಮಿ ಪಕ್ಷ(ಎಎಪಿ) ಸರ್ಕಾರ ನಿರ್ಧರಿಸಿದೆ...

ನವದೆಹಲಿ: ಬಿಎಸ್ಎಫ್, ದೆಹಲಿ ಪೊಲೀಸ್ ಮತ್ತು ದೆಹಲಿ ಅಗ್ನಿಶಾಮಕ ದಳದ 20 ಹುತಾತ್ಮ ಕುಟುಂಬಕ್ಕೆ ತಲಾ 1 ಕೋಟಿ ರುಪಾಯಿ ಪರಿಹಾರ ನೀಡಲು ಆಮ್ ಆದ್ಮಿ ಪಕ್ಷ(ಎಎಪಿ) ಸರ್ಕಾರ ನಿರ್ಧರಿಸಿದೆ. 
ತಮ್ಮ ಸೇವಾ ಅವಧಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ನೈತಿಕತೆಯನ್ನು ಹೆಚ್ಚಿಸುವ ಸಲುವಾಗಿ ಈ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯ ಸರ್ಕಾರ ಅದಾಗಲೇ ಧೈರ್ಯವಾಗಿ ಹೋರಾಡಿ ಮೃತಪಟ್ಟ 20 ಹುತಾತ್ಮರ ಕುಟುಂಬಗಳನ್ನು ಗುರುತಿಸಲಾಗಿದೆ ಎಂದು ದೆಹಲಿಯ ಎಎಸಿ ಸರ್ಕಾರ ಹೇಳಿದೆ. 
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ತ್ಯಾಗ ಅಮೂಲ್ಯವಾಗಿದ್ದು. ದೇಶ ಅವರಿಗೆ ಯಾವಾಗಲು ಋಣವಾಗಿರುತ್ತದೆ ಎಂದು ಕಳೆದ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಅದೇ ರೀತಿ ಕಳೆದ ಮೂರು ವರ್ಷಗಳ ಹಿಂದೆ ನಾವು ಹುತಾತ್ಮ ಯೋಧರಿಗೆ ನೆರವಾಗಲು ಅವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರ ನೀಡಲು ತೀರ್ಮಾನಿಸಿತ್ತು ಎಂದು ಎಎಪಿ ಹೇಳಿದೆ. 
ಜುಲೈ 25ರಂದು ದೆಹಲಿ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ. 2015ರ ಏಪ್ರಿಲ್ 1ರಂದು ಈ ಯೋಜನೆಯನ್ನು ಮಂಡಿಸಲಾಗಿತ್ತು. 2016ರಲ್ಲಿ ಲೆಫ್ಟಿನೆಂಟ್ ಗೌವರ್ನರ್ ಈ ಯೋಜನೆಯನ್ನು ತಡೆ ಹಿಡಿದಿದ್ದರು. ಇದಕ್ಕೆ ದೆಹಲಿ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT