ಸಾಂದರ್ಭಿಕ ಚಿತ್ರ 
ದೇಶ

ರಫೆಲ್ ಒಪ್ಪಂದದಲ್ಲಿ ಸರ್ಕಾರ ನಿಯಮ ಮುರಿದಿದೆ: ಮಾಜಿ ಸಚಿವ ಚಿದಂಬರಂ ಆರೋಪ

ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ...

ನವದೆಹಲಿ: ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ, ಕೇಂದ್ರ ಸರ್ಕಾರ ರಕ್ಷಣಾ ಸ್ವಾಧೀನ ಪ್ರಕ್ರಿಯೆಯನ್ನು ನಿರ್ಲಕ್ಷಿಸಿದ್ದು ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಿದೆ ಎಂದಿದ್ದಾರೆ.

ರಫೆಲ್ ಯುದ್ಧ ವಿಮಾನ ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ ಸರ್ಕಾರ ಭದ್ರತಾ ಸಂಪುಟ ಸಮಿತಿಯನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದಿದ್ದಾರೆ.

 ರಫೆಲ್ ಒಪ್ಪಂದದಲ್ಲಿ ರಕ್ಷಣಾ ಸ್ವಾಧೀನ ಪ್ರಕ್ರಿಯೆಯನ್ನು ಏಕೆ ತಿರಸ್ಕರಿಸಲಾಯಿತು ಮತ್ತು ಒಪ್ಪಂದ ಸಮಾಲೋಚನಾ ಸಮಿತಿ ಮತ್ತು ಬೆಲೆ ಸಮಾಲೋಚನಾ ಸಮಿತಿಯನ್ನು ಏಕೆ ಇದರಿಂದ ದೂರವಿಡಲಾಗಿದೆ. ಭದ್ರತೆಗೆ ಸಂಬಂಧಪಟ್ಟ ಸಂಪುಟ ಸಮಿತಿಯನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ ಮತ್ತು ಇಂದಿನ ಎನ್ ಡಿಎ ಸರ್ಕಾರದಲ್ಲಿ ಪ್ರತಿ ವಿಮಾನದ ಖರೀದಿ ಬೆಲೆಯಲ್ಲಿ ಬಹಳ ವ್ಯತ್ಯಾಸವಿದೆ. ಯುಪಿಎ ಅವಧಿಯಲ್ಲಿ ಪ್ರತಿ ವಿಮಾನದ ಗುತ್ತಿಗೆ ಬೆಲೆ 526 ಕೋಟಿ ರೂಪಾಯಿಗಳಾಗಿದ್ದವು. ಎನ್ ಡಿಎ ಗುತ್ತಿಗೆ ಬೆಲೆ ಪ್ರತಿ ವಿಮಾನಕ್ಕೆ 1,670 ಕೋಟಿ ರೂಪಾಯಿ ಎಂದು ಹೇಳುತ್ತಿದೆ. ಈ ಮೊತ್ತ ಸರಿಯಾಗಿದ್ದರೆ ಈಗ ವಿಮಾನದ ಬೆಲೆ ಮೂರು ಪಟ್ಟು ಅಧಿಕ ಏಕೆ ಆಗಿದೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT