ವಾರಣಾಸಿ: ಅಣ್ಣ ತಂಗಿಯ ಬಾಂಧವ್ಯ ಸಾರುವ ರಕ್ಷಾ ಬಂಧನ ಪ್ರಯುಕ್ತ ಮುಸ್ಲಿಂ ಮಹಿಳಾ ಸಂಘಟನೆಯ ಸದಸ್ಯೆಯರು ಪ್ರಧಾನಿ ಮೋದಿಗಾಗಿ ವಿಶಿಷ್ಟ ರಾಖಿಯನ್ನು ತಯಾರಿಸುವಲ್ಲಿ ನಿರತರಾಗಿದ್ದಾರೆ.
ನಾಳೆ ದೇಶಾದ್ಯಂತ ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ವಾರಣಾಸಿಯ ಮುಸ್ಲಿಂ ಮಹಿಳಾ ಸಂಘಟನೆಯ ಸದಸ್ಯೆಯರು ಪ್ರಧಾನಿಗೆ ಕಳುಹಿಸಲೆಂದೇ ವಿಶಿಷ್ಟವಾದ ರಾಖಿ ತಯಾರಿಸುವಲ್ಲಿ ನಿರತರಾಗಿದ್ದಾರೆ.
2013ರಿಂದಲೇ ನಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಳುಹಿಸುತ್ತಿದ್ದೇವೆ. ತಂದೆ ಹಾಗೂ ಅಣ್ಣನಾಗಿ ಅವರು ನಮ್ಮ ಬಗ್ಗೆ ಯೋಚಿಸುತ್ತಿದ್ದಾರೆ. ಪ್ರತಿ ಹಂತದಲ್ಲಿಯೂ ಅವರು ನಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಮಹಿಳಾ ಸದಸ್ಯೆರು ಅಭಿಪ್ರಾಯ ಹಂಚಿಕೊಂಡಿದ್ದಾರೆ.