ಉತ್ತರಪ್ರದೇಶದಲ್ಲಿ ವೈದ್ಯರ ಅವಾಂತರ: ಮಹಿಳೆ ಹೊಟ್ಟೆಯಲ್ಲಿ ಬಟ್ಟೆ ಪತ್ತೆ! 
ದೇಶ

ಉತ್ತರಪ್ರದೇಶದಲ್ಲಿ ವೈದ್ಯರ ಅವಾಂತರ: ಮಹಿಳೆ ಹೊಟ್ಟೆಯಲ್ಲಿ ಬಟ್ಟೆ ಪತ್ತೆ!

ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಕತ್ತರಿ ಮತ್ತು ಮತ್ತಿತರ ವಸ್ತುಗಳ ಪತ್ತೆಯಾಗಿದ್ದ ಘಟನೆಗಳನ್ನು ಕೇಳಿದ್ದೇವೆ. ಆದರೆ, ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬಟ್ಟೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ...

ಇಟಾವ: ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಕತ್ತರಿ ಮತ್ತು ಮತ್ತಿತರ ವಸ್ತುಗಳ ಪತ್ತೆಯಾಗಿದ್ದ ಘಟನೆಗಳನ್ನು ಕೇಳಿದ್ದೇವೆ. ಆದರೆ, ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬಟ್ಟೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 
ಉತ್ತರಪ್ರದೇಶದ ಇಟಾವ ಜಿಲ್ಲೆಯಲ್ಲಿ ಮಹಿಳೆ ಕೆಲ ದಿನಗಳ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಇದಾದ ಬಳಿಕ ಕೆಲವೇ ದಿನಗಳಲ್ಲಿ ಮಹಿಳೆ ಅತೀವ್ರ ಹೊಟ್ಟೆನೋವು ಎಂದು ಹೇಳಿದ್ದಾರೆ. 
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ಪರಿಶೀಲನೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿ ಬಟ್ಟೆಯ ತುಂಡು ಇರುವುದಾಗಿ ಹೇಳಿದ್ದಾರೆ. ಬಳಿಕ ಕುಟುಂಬಸ್ಥರು ಮತ್ತೆ ಶಸ್ತ್ರಚಿಕಿತ್ಸೆ ನಡೆಸಿ ಬಟ್ಟೆಯನ್ನು ಹೊರ ತೆಗೆದಿದ್ದಾರೆ. ಇದಾಗ ಬಳಿಕವೂ ಮತ್ತೆ ಮಹಿಳೆ ಹೊಟ್ಟೆನೋವು ಎಂದು ಹೇಳಿಕೊಂಡಿದ್ದಾರೆ. 
ಎರಡನೇ ಬಾರಿ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಹಣ ಕೇಳಿದ್ದರು. ಹಣ ನೀಡಿ ಶಸ್ತ್ರಚಿಕಿತ್ಸೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಈಗಲೂ ಆಕೆಗೆ ರಕ್ತಸ್ರಾವವಾಗುತ್ತಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದಾಳೆಂದು ಕುಟುಂಬಸ್ಥರು ಹೇಳಿದ್ದಾರೆ. 
ಪ್ರಸ್ತುತ ಮಹಿಳೆಯನ್ನು ಲಖನೌ ಆಸ್ಪತ್ರೆಗೆ ದಾಖಲಿಸಬೇಕಾಗಿದೆ. ಆದರೆ, ಈ ಮೊದಲು ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರು ಸೂಕ್ತ ದಾಖಲೆಗಳನ್ನು ನೀಡುತ್ತಿಲ್ಲವಾದ್ದರಿಂದ ಕುಟುಂಬಸ್ಥರಿಗೆ ದಿಕ್ಕು ತೋಚದಂತಾಗಿದೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಸ್ಪತ್ರೆಯ ಮುಖ್ಯ ವೈದ್ಯಕೀಯ ವರಿಷ್ಠಾಧಿಕಾರಿ ಎಸ್.ಎಸ್. ಭದೋರಿಯಾ ಅವರು, ಕುಟುಂಬವು ವೈದ್ಯರ ಅಚಾತುರ್ಯದ ಬಗ್ಗೆ ದೂರು ನೀಡಿದ್ದು, ಇದೀಗ ಎರಡೂ ಕಡೆಗಳಿಂದಲೂ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT