ಸುಬ್ರಮಣ್ಯನ್ ಸ್ವಾಮಿ 
ದೇಶ

'ಮಾಲ್ಡೀವ್ಸ್ ಅನ್ನು ಭಾರತ ಆಕ್ರಮಿಸಿಕೊಳ್ಳಬೇಕು' ಸುಬ್ರಮಣ್ಯನ್ ಸ್ವಾಮಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಸರ್ಕಾರ!

ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮಗಳು ನಡೆದರೆ ಭಾರತ ಆ ದೇಶವನ್ನು ಆಕ್ರಮಿಸಿಕೊಳ್ಳಬೇಕು ಎಂಬ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಅವರ ಹೇಳಿಕೆಯಿಂದ...

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮಗಳು ನಡೆದರೆ ಭಾರತ ಆ ದೇಶವನ್ನು ಆಕ್ರಮಿಸಿಕೊಳ್ಳಬೇಕು ಎಂಬ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಅವರ ಹೇಳಿಕೆಯಿಂದ ಸರ್ಕಾರ ಅಂತರವನ್ನು ಕಾಯ್ದುಕೊಂಡಿದೆ. 
ಸುಬ್ರಮಣ್ಯನ್ ಸ್ವಾಮಿ ಅವರು ಕಳೆದ ಎರಡು ದಿನಗಳ ಹಿಂದೆ ಕೊಲಂಬೋದಲ್ಲಿ ಮಾಲ್ಡೀವ್ಸ್ ನ ದೇಶಭ್ರಷ್ಟ ಅಧ್ಯಕ್ಷ ಮೊಹಮ್ಮದ್ ನಶೀದ್ ರನ್ನು ಭೇಟಿಯಾಗಿ ಬಂದ ಬಳಿಕ ಸ್ವಾಮಿ ಈ ರೀತಿ ಟ್ವೀಟ್ ಮಾಡಿದ್ದರು. 
ಸ್ವಾಮಿ ಟ್ವೀಟ್ ನಲ್ಲಿ ಅಧ್ಯಕ್ಷೀಯ ಚುನಾವಣಾ ಅಕ್ರಮಗಳು ನಡೆದರೆ ಮಾಲ್ಡೀವ್ಸ್ ಒಳಗೆ ಸೇನೆಯನ್ನು ನುಗ್ಗಿಸಿ ಭಾರತ ಆಕ್ರಮಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. 
ಬಿಜೆಪಿ ಸಂಸದರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಡಾ. ಸುಬ್ರಮಣ್ಯನ್ ಸ್ವಾಮಿ ಅವರು ಟ್ವೀಟ್ ನಲ್ಲಿ ವ್ಯಕ್ತಪಡಿಸಿರುವುದು ಅವರ ವೈಯಕ್ತಿಕ ಅಭಿಪ್ರಾಯ ಅದು ಭಾರತ ಸರ್ಕಾರಕದ ದೃಷ್ಟಿಕೋನವನ್ನು ಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT