ರಕ್ಷಾ ಬಂಧನ: ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮನಾದ ಅಣ್ಣ- ಪ್ರತಿಮೆಗೇ ರಾಖಿ ಕಟ್ಟಿ ಕಣ್ಣೀರಿಟ್ಟ ಸಹೋದರಿ 
ದೇಶ

ರಕ್ಷಾ ಬಂಧನ: ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮನಾದ ಅಣ್ಣ- ಪ್ರತಿಮೆಗೇ ರಾಖಿ ಕಟ್ಟಿ ಕಣ್ಣೀರಿಟ್ಟ ಸಹೋದರಿ

ದೇಶದಾದ್ಯಂತ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ತಮ್ಮ ಪ್ರೀತಿಯ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದರೆ ಇಲ್ಲೊಬ್ಬ ಸಹೋದರಿ ನೋವಿನಿಂದ ರಕ್ಷಾಬಂಧನ ದಿನವನ್ನು ಆಚರಣೆ...

ದಂತೇವಾಡ: ದೇಶದಾದ್ಯಂತ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ತಮ್ಮ ಪ್ರೀತಿಯ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದರೆ ಇಲ್ಲೊಬ್ಬ ಸಹೋದರಿ ನೋವಿನಿಂದ ರಕ್ಷಾಬಂಧನ ದಿನವನ್ನು ಆಚರಣೆ ಮಾಡಿದ್ದಾಳೆ.
ಸುಕ್ಮಾದ ತೊಂಗಪಾಲ್ ಎಂಬದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈಕೆಯ ಸಹೋದರ 2014ರಲ್ಲಿ ನಕ್ಸಲರ ಗುಂಡಿಗೆ ಬಲಿಯಾಗಿದ್ದರು. 
ಸಹೋದರನೊಂದಿಗೆ ಆತ್ಮೀಯ ಬಂಧನವನ್ನು ಹೊಂದಿದ್ದೆ. ತೊಂಗಪಾಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನನ್ನ ಅಣ್ಣ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ 2014ರಲ್ಲಿ ಹುತಾತ್ಮನಾಗಿದ್ದ. ರಕ್ಷಾಬಂಧನ ದಿನದಂದು ಸಹೋದರನಿಲ್ಲ. ಬಹಳ ದುಃಖವಾಗುತ್ತಿದೆ. ಆತನಿಗಾಗಿರುವ ರಾಖಿಯನ್ನು ಮತ್ತೊಬ್ಬರಿಗೆ ಕಟ್ಟಲು ನನಗೆ ಇಷ್ಟವಿಲ್ಲ. ಆದರೆ, ನನ್ನ ಅಣ್ಣನ ಬಗ್ಗೆ ನನಗೆ ಹೆಮ್ಮೆ. ನನಗಿದ್ದದ್ದು ಒಬ್ಬನೇ ಅಣ್ಣ. ಆತನನ್ನು ಕಳೆದುಕೊಂಡಿದ್ದೇನೆ. ಇದೀಗ ಆತನ ಪ್ರತಿಮೆಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ್ದೇನೆಂದು ಯುವತಿ ಹೇಳಿದ್ದಾಳೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT