ರಕ್ಷಾ ಬಂಧನ: ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮನಾದ ಅಣ್ಣ- ಪ್ರತಿಮೆಗೇ ರಾಖಿ ಕಟ್ಟಿ ಕಣ್ಣೀರಿಟ್ಟ ಸಹೋದರಿ 
ದೇಶ

ರಕ್ಷಾ ಬಂಧನ: ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮನಾದ ಅಣ್ಣ- ಪ್ರತಿಮೆಗೇ ರಾಖಿ ಕಟ್ಟಿ ಕಣ್ಣೀರಿಟ್ಟ ಸಹೋದರಿ

ದೇಶದಾದ್ಯಂತ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ತಮ್ಮ ಪ್ರೀತಿಯ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದರೆ ಇಲ್ಲೊಬ್ಬ ಸಹೋದರಿ ನೋವಿನಿಂದ ರಕ್ಷಾಬಂಧನ ದಿನವನ್ನು ಆಚರಣೆ...

ದಂತೇವಾಡ: ದೇಶದಾದ್ಯಂತ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ತಮ್ಮ ಪ್ರೀತಿಯ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದರೆ ಇಲ್ಲೊಬ್ಬ ಸಹೋದರಿ ನೋವಿನಿಂದ ರಕ್ಷಾಬಂಧನ ದಿನವನ್ನು ಆಚರಣೆ ಮಾಡಿದ್ದಾಳೆ.
ಸುಕ್ಮಾದ ತೊಂಗಪಾಲ್ ಎಂಬದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈಕೆಯ ಸಹೋದರ 2014ರಲ್ಲಿ ನಕ್ಸಲರ ಗುಂಡಿಗೆ ಬಲಿಯಾಗಿದ್ದರು. 
ಸಹೋದರನೊಂದಿಗೆ ಆತ್ಮೀಯ ಬಂಧನವನ್ನು ಹೊಂದಿದ್ದೆ. ತೊಂಗಪಾಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನನ್ನ ಅಣ್ಣ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ 2014ರಲ್ಲಿ ಹುತಾತ್ಮನಾಗಿದ್ದ. ರಕ್ಷಾಬಂಧನ ದಿನದಂದು ಸಹೋದರನಿಲ್ಲ. ಬಹಳ ದುಃಖವಾಗುತ್ತಿದೆ. ಆತನಿಗಾಗಿರುವ ರಾಖಿಯನ್ನು ಮತ್ತೊಬ್ಬರಿಗೆ ಕಟ್ಟಲು ನನಗೆ ಇಷ್ಟವಿಲ್ಲ. ಆದರೆ, ನನ್ನ ಅಣ್ಣನ ಬಗ್ಗೆ ನನಗೆ ಹೆಮ್ಮೆ. ನನಗಿದ್ದದ್ದು ಒಬ್ಬನೇ ಅಣ್ಣ. ಆತನನ್ನು ಕಳೆದುಕೊಂಡಿದ್ದೇನೆ. ಇದೀಗ ಆತನ ಪ್ರತಿಮೆಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದ್ದೇನೆಂದು ಯುವತಿ ಹೇಳಿದ್ದಾಳೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT