ರಕ್ಷಾ ಬಂಧನ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ರಾಖಿ ಕಟ್ಟಿದ ಮಕ್ಕಳು
ನವದೆಹಲಿ: ದೇಶದಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು.
ಶಾಲಾ ಮಕ್ಕಳು, ಅಂಗವಿಕಲರು ಪ್ರಧಾನಿ ಮೋದಿ ಹಾಗೂ ಕೋವಿಂದ್ ಅವರಿಗೆ ರಾಖಿ ಕಟ್ಟಿ ಸಂಭ್ರಮವನ್ನು ಆಚರಿಸಿದರು.
ಗುಜರಾತ್ ರಾಜ್ಯ ಮಹಿಳಾ ಸಂಸದರು, ಉತ್ತರಪ್ರದೇಶ ಮತ್ತು ವಾರಣಾಸಿಯ ವಿಧವೆಯರೂ ಕೂಡ ಪ್ರಧಾನಿ ಮೋದಿಯವರಿಗೆ ರಾಖಿ ಕಟ್ಟಿ ಸಂತಸವನ್ನು ಹಂಚಿಕೊಂಡರು.
ಇನ್ನು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ಸಂಸತವನ್ನು ಹಂಚಿಕೊಂಡರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos