ಅಮಿತ್ ಶಾ 
ದೇಶ

ಕರುಣಾನಿಧಿ ಸಂತಾಪ ಸೂಚಕ ಸಭೆಗೆ ಅಮಿತ್ ಶಾಗೆ ಆಹ್ವಾನ; ಬಿಜೆಪಿ-ಡಿಎಂಕೆ ಮಧ್ಯೆ ಮೈತ್ರಿ?

ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಅವರ ನಿಧನ ಹಿನ್ನಲೆಯಲ್ಲಿ ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಅವರ ನಿಧನ ಹಿನ್ನಲೆಯಲ್ಲಿ ಆಯೋಜಿಸಿರುವ ಸಂತಾಪ ಸಭೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಆಹ್ವಾನಿಸಿದ ದಿನದಿಂದ ಎರಡೂ ಪಕ್ಷಗಳ ನಡುವೆ ಮೈತ್ರಿಯ ಸಾಧ್ಯತೆಯ ಊಹಾಪೋಹ ಕೇಳಿಬರುತ್ತಿದೆ. ಮಾಜಿ ಕೇಂದ್ರ ಸಚಿವ ಟಿ ಆರ್ ಬಾಲು ಖುದ್ದಾಗಿ ಬಿಜೆಪಿ ಅಧ್ಯಕ್ಷರಿಗೆ ಕರುಣಾನಿಧಿಯವರಿಗೆ ಸಂತಾಪ ಸೂಚಕ ಸಭೆಗೆ ಆಹ್ವಾನಿಸಿದ್ದು, ಇದಕ್ಕೆ ಅಮಿತ್ ಶಾ ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಳೆದ ರಾತ್ರಿ ಡಿಎಂಕೆ ಪಕ್ಷದವರನ್ನು ಸಂಪರ್ಕಿಸಿದಾಗ ಆಗಸ್ಟ್ 30ರಂದು ನಡೆಯುವ ಸಭೆಯಲ್ಲಿ ಅಮಿತ್ ಶಾ ಅವರು ಭಾಗವಹಿಸುವ ಬಗ್ಗೆ ನಮಗೆ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದಿದ್ದಾರೆ.

ಈ ಮಧ್ಯೆ ಡಿಎಂಕೆ ಪ್ರಧಾನ ಕಾರ್ಯದರ್ಶಿ ದುರೈಮುರುಗನ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮ ವೆಲ್ಲೂರಿಗೆ ಬಂದಿದ್ದಾಗ ಗೌರವ ನಮನ ಸಲ್ಲಿಸಲು ಹೋಗಿದ್ದರು ಮತ್ತು ಮಾಜಿ ಸಚಿವ ಕೆ ಪಿಚಂಡಿ ತಿರುವನ್ನಮಲೈಯಲ್ಲಿ ಗೌರವ ಸೂಚಿಸಿದ್ದರು.

ಇಷ್ಟೆಲ್ಲಾ ಊಹಾಪೋಹಕ್ಕೆ ಕಾರಣವಾಗಿದ್ದು ಬಿಜೆಪಿಯ ಹಿರಿಯ ನಾಯಕ ಸುಬ್ರಹ್ಮಣ್ಯ ಸ್ವಾಮಿಯವರು ಮೊನ್ನೆ ಶುಕ್ರವಾರ ಮಾಡಿರುವ ಟ್ವೀಟ್. ಡಿಎಂಕೆ ಸಭೆಗೆ ಹೋಗದಿರಲು ಅಮಿತ್ ಶಾ ಅವರು ನಿರ್ಧರಿಸಿದ್ದು ಒಳ್ಳೆಯದೇ ಆಯಿತು ಎಂದಿದ್ದರು. ಡಿಎಂಕೆಯ ಸಂತಾಪ ಸೂಚಕ ಸಭೆಗೆ ಅಮಿತ್ ಶಾ ಅವರು ಭಾಗವಹಿಸುತ್ತಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪರ, ವಿರೋಧ ಚರ್ಚೆಗಳು ಶುರುವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿ

ಚೀನಾದ ರೋಬೋಟ್ ಡಾಗ್ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

'ಬರೀ ಸುಳ್ಳು.. ನಿಮ್ಮಿಂದಾಗಿ ಹೊಟೆಲ್ ನಲ್ಲಿ ಪಾತ್ರೆ ತೊಳೆಯಬೇಕಾಯಿತು': ಪಾಕ್ ವಿರುದ್ಧ ನಾಯಕ Shakeel Ammad Butt ಕಿಡಿ!

'ಅವರು ರಕ್ತದ ರುಚಿ ನೋಡಿದ್ದಾರೆ': PCB ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಪಾಕ್ ಮಾಜಿ ಪ್ರಧಾನಿ ಸೋದರಿಯರ ಗಂಭೀರ ಆರೋಪ

T20 World Cup 2026: ಭಾರತದ ವಿರುದ್ಧ ಪಂದ್ಯ ಆಡಲು 'Actual Hero' ಕಾರಣ; ವರಸೆ ಬದಲಿಸಿದ ಪಾಕಿಸ್ತಾನ!

SCROLL FOR NEXT