ಪ್ರಕಾಶ್ ಸಿಂಗ್ ಬಾದಲ್ 
ದೇಶ

ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಕ್ರಮ: ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ದೋಷಿ

ಪಂಜಾಬ್ ನ ಫರೀದ್ ಕೋಟ್ ಜಿಲ್ಲೆಯ ಕೋಟ್ಕಾಪುರದಲ್ಲಿ ಸಿಖ್ ಸಮುದಾಯ ಮತ್ತು ಪೊಲೀಸರ ನಡುವಿನ ಗಲಭೆಗೆ ...

ಚಂಡೀಗಢ: ಪಂಜಾಬ್ ನ ಫರೀದ್ ಕೋಟ್ ಜಿಲ್ಲೆಯ ಕೋಟ್ಕಾಪುರದಲ್ಲಿ  ಸಿಖ್ ಸಮುದಾಯ ಮತ್ತು ಪೊಲೀಸರ ನಡುವಿನ ಗಲಭೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ರಂಜಿತ್ ಸಿಂಗ್ ಆಯೋಗ ನೀಡಿದ ವರದಿಯನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಪೊಲೀಸ್ ಕ್ರಮ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ವಿರುದ್ಧ ದೋಷಾರೋಪಣೆ ಮಾಡಲಾಗಿದೆ.
ಆಗಸ್ಟ್ 16ರಂದು ಐದು ಪುಟಗಳ ಪೂರಕ ವರದಿಯನ್ನು ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಈ ಮುಂಚೆ ನೀಡಿದ್ದ ವರದಿಯಲ್ಲಿ ಗಲಭೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಕೈವಾಡ ಇದೆ ಎಂದು ಹೇಳಿತ್ತು. ಆದರೆ ಈಗ ನೇರವಾಗಿ ಅಂದಿನ ಮುಖ್ಯಮಂತ್ರಿ(ಪ್ರಕಾಶ್ ಸಿಂಗ್ ಬಾದಲ್)ಗಳ ಪಾತ್ರ ಇದೆ ಎಂದು ಹೇಳಿದೆ.
ಅಂದಿನ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು ಡಿಜಿಪಿ ಮತ್ತು ಜಿಲ್ಲಾ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೆ ಸಿಎಂ ಆದೇಶದಂತೆ ಅಂತಿಮವಾಗಿ ಪೊಲೀಸರು ಕೋಟ್ಕಾಪುರದಲ್ಲಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.
2015ರಲ್ಲಿ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ್ ಸಾಹಿಬ್ ನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಸಿಖ್ ಸಮುದಾಯದವರು ಕೋಟ್ಕಾಪುರದಲ್ಲಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರತಿಭಟನಾಕರರನ್ನು ಬಂಧಿಸಲು ಯತ್ನಿಸಿದಾಗ ನಡೆದ ಹಿಂಸಾಚಾರದಲ್ಲಿ 13 ಮಂದಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT