ತರುಣ್ ಗೊಗೋಯ್ 
ದೇಶ

ಎನ್ ಆರ್ ಸಿ ಉದ್ದೇಶ ವಿಫಲವಾಗಿದೆ: ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೋಯ್

ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ ಆರ್ ಸಿ ಬಗ್ಗೆ ಅಸ್ಸಾಂ ನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೋಯ್ ಪ್ರತಿಕ್ರಿಯೆ ನೀಡಿದ್ದು, ಎನ್ ಆರ್ ಸಿ ಯ ಉದ್ದೇಶ ವಿಫಲವಾಗಿದೆ

ನವದೆಹಲಿ: ಅಕ್ರಮ  ಬಾಂಗ್ಲಾ ವಲಸಿಗರನ್ನು ಗುರುತಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಎನ್ ಆರ್ ಸಿ ಬಗ್ಗೆ ಅಸ್ಸಾಂ ನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೋಯ್ ಪ್ರತಿಕ್ರಿಯೆ ನೀಡಿದ್ದು, ಎನ್ ಆರ್ ಸಿ ಯ ಉದ್ದೇಶ ವಿಫಲವಾಗಿದೆ ಎಂದು ಹೇಳಿದ್ದಾರೆ. 
40 ಲಕ್ಷ ಜನರನ್ನು ಭಾರತೀಯರಲ್ಲ ಎಂದು ಗುರುತಿಸಲಾಗಿದೆ. ಈ ಪೈಕಿ ಬಹುತೇಕರು ಭಾರತೀಯರೇ ಆಗಿದ್ದು, ಎನ್ ಆರ್ ಸಿ ಉದ್ದೇಶವೇ ಸಂಪೂರ್ಣ ವಿಫಲವಾದಂತಿದೆ ಎಂದು ಗೋಗೋಯ್ ಅಭಿಪ್ರಾಯಪಟ್ಟಿದ್ದಾರೆ. 
2010 ರಲ್ಲಿ ಎನ್ಆರ್ ಸಿ ಯೋಜನೆ ಪ್ರಾರಂಭವಾಯಿತು.  ಯೋಜನೆ ಬಗ್ಗೆ ಅಸಮಾಧಾನ ಉಂಟಾದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಯಿತು, ನಂತರ ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಜಾರಿಗೊಳಿಸಲು ನಾನು ಸಂಪುಟ ಸಮಿತಿ ರಚಿಸಿದ್ದೆ.  ಅಕ್ರಮ ಬಾಂಗ್ಲಾ ವಲಸಿಗರ್ನನು ಗುರುತಿಸಲು ನಾವು ಸಿದ್ಧಪಡಿಸಿದ್ದ ವಿಧಾನಗಳನ್ನು ರಿಜಿಸ್ಟಾರ್ ಜನರಲ್ ಆಫ್ ಇಂಡಿಯಾ ಬಹುತೇಕ ಒಪ್ಪಿತ್ತು ಎಂದು ತರುಣ್ ಗೊಗೋಯ್ ತಿಳಿಸಿದ್ದಾರೆ. 
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಹಾಗೂ ರಿಜಿಸ್ಟಾರ್ ಜನರಲ್ ಆಫ್ ಇಂಡಿಯಾಗೆ ಈ ಎನ್ ಆರ್ ಸಿ ಪರಿಕಲ್ಪನೆ ಸ್ಪಷ್ಟವಾಗಿಲ್ಲ, ಈ ಹಿನ್ನೆಲೆಯಲ್ಲಿ ಯೋಜನೆಯನ್ನು ತಪ್ಪಾಗಿ ಜಾರಿ ಮಾಡಲಾಗುತ್ತಿದೆ ಎಂದು ತರುಣ್ ಗೊಗೋಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ