ಆಸ್ಪತ್ರೆಯ ಚಿತ್ರ 
ದೇಶ

ಮಧ್ಯಪ್ರದೇಶ: ಎಲ್ಲಾ ರೋಗಿಗಳಿಗೂ ಒಂದೇ ಸಿರಿಂಜ್ ಬಳಕೆ; ಒಬ್ಬರು ಸಾವು, 25 ಜನರ ಸ್ಥಿತಿ ಗಂಭೀರ

ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಎಲ್ಲಾರಿಗೂ ಒಂದೇ ಸಿರಿಂಜ್ ಬಳಕೆ ಮಾಡಿದ್ದರಿಂದ ಒಬ್ಬರು ಸಾವನ್ನಪ್ಪಿದ್ದು, ಇನ್ನಿತರ 25 ಮಂದಿ ಪರಿಸ್ಥಿತಿ ಗಂಭೀರವಾಗಿದೆ.

ದಾಟಿಯಾ: ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಎಲ್ಲಾ ರೋಗಿಗಳಿಗೂ ರಿಗೂ ಒಂದೇ ಸಿರಿಂಜ್ ಬಳಕೆ ಮಾಡಿದ್ದರಿಂದ ಒಬ್ಬರು ಸಾವನ್ನಪ್ಪಿದ್ದು, ಇನ್ನಿತರ 25 ಮಂದಿ ಪರಿಸ್ಥಿತಿ ಗಂಭೀರವಾಗಿದೆ.

ನರ್ಸ್ ಗಳ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಆಸ್ಪತ್ರೆಯ ಸರ್ಜನ್ ಡಾ. ಪಿ. ಕೆ. ಶರ್ಮಾ ಸುದ್ದಿಸಂಸ್ಥೆಯೊಂದಕ್ಕೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿನ ನರ್ಸ್ ಗಳು ಶುದ್ದೀಕರಿಸಿದ ನೀರಿನ ಬದಲಿಗೆ ಸಾಮಾನ್ಯ ನೀರನ್ನೇ ಬಳಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲಾರಿಗೂ ಒಂದೇ ಸಿರಿಂಜ್ ಬಳಸಿರುವುದರಿಂದ ಈ ಅವಘಡ ಸಂಭವಿಸಿದೆ ಎಂದು ಶರ್ಮಾ ಹೇಳಿದ್ದಾರೆ.

ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಉಡಾಫೆಯಿಂದ ನರ್ಸ್ ಗಳು ಎಲ್ಲರಿಗೂ ಒಂದೇ ಸಿರಿಂಜ್ ಬಳಕೆ ಮಾಡಿರುವ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತನಿಖೆ ಮುಂದುವರೆದಿದ್ದು, ವೈದ್ಯಕೀಯ ಮಂಡಳಿಯಿಂದ ವರದಿಗಾಗಿ ಕಾಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO