ಸಂಗ್ರಹ ಚಿತ್ರ 
ದೇಶ

ಅಜಂ ಖಾನ್ ನನ್ನ ಪುತ್ರಿಗೆ 'ಆ್ಯಸಿಡ್ ದಾಳಿ' ಬೆದರಿಕೆ ಹಾಕಿದ್ದಾರೆ: ಅಮರ್ ಸಿಂಗ್

ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ನನ್ನ ಅಪ್ರಾಪ್ತ ಪುತ್ರಿಯ ಮೇಲೆ ಆ್ಯಸಿಡ್ ದಾಳಿ ಮಾಡುವ ಬೆದರಿಕೆ ಹಾಕಿದ್ದು, ಇದರಿಂದ ನನ್ನ ಪುತ್ರಿ ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಲಖನೌ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ನನ್ನ ಅಪ್ರಾಪ್ತ ಪುತ್ರಿಯ ಮೇಲೆ ಆ್ಯಸಿಡ್ ದಾಳಿ ಮಾಡುವ ಬೆದರಿಕೆ ಹಾಕಿದ್ದು, ಇದರಿಂದ ನನ್ನ ಪುತ್ರಿ ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಉಚ್ಛಾಟಿತ ನಾಯಕ ಅಮರ್ ಸಿಂಗ್ ಅಜಂ ಖಾನ್ ರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದು, ಅವರು ಈ ದೇಶದಲ್ಲಿ ಜೀವಿಸಲು ಯೋಗ್ಯರಲ್ಲ. ದೇಶ ವಿಭಜನೆ ಸಂದರ್ಭದಲ್ಲಿ ಉಂಟಾಗದ ಕೋಮುಗಲಭೆ ಅವರು ಅಧಿಕಾರದಲ್ಲಿದ್ದಾಗ ವ್ಯಾಪಕವಾಗಿ ಆಗಿತ್ತು ಎಂದು ಕಿಡಿಕಾರಿದ್ದಾರೆ. ಅಲ್ಲದೆ ತಮ್ಮ ಪತ್ನಿ ಮತ್ತು ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿ ನನ್ನನ್ನು ಕೊಲ್ಲಬೇಕು ಎಂದು ಅಜಂ ಖಾನ್ ಹೇಳಿದ್ದರು ಎಂದು ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. 
ಇದೇ ವೇಳೆ ಗವರ್ನರ್ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ದೂರು ನೀಡುತ್ತೇನೆ ಎಂದು ಅಮರ್ ಸಿಂಗ್ ಹೇಳಿದ್ದಾರೆ. ಅಂತೆಯೇ ನನ್ನ ಮಗಳಿಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆಯ ಅಗತ್ಯತೆ ಇದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ. ಅಜಂ ಖಾನ್ ನೇತೃತ್ವದ ರಾಮ್ ಪುರದ ಮೌಲಾನ ಮಹಮದ್ ಅಲಿ ಜವಹರ್ ವಿವಿಗೆ ಬರುತ್ತಿರುವ ಆದಾಯದ ಮೂಲದ ಕುರಿತೂ ಸುಧೀರ್ಘ ತನಿಖೆಯಾಗಬೇಕು ಎಂದು ಆಗ್ರಹಿಸಿರುವ ಅಮರ್ ಸಿಂಗ್ ವಿವಿಯ ಚಾನ್ಸಿಲರ್ ರನ್ನು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT