ಸಂಗ್ರಹ ಚಿತ್ರ 
ದೇಶ

ಅಜಂ ಖಾನ್ ನನ್ನ ಪುತ್ರಿಗೆ 'ಆ್ಯಸಿಡ್ ದಾಳಿ' ಬೆದರಿಕೆ ಹಾಕಿದ್ದಾರೆ: ಅಮರ್ ಸಿಂಗ್

ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ನನ್ನ ಅಪ್ರಾಪ್ತ ಪುತ್ರಿಯ ಮೇಲೆ ಆ್ಯಸಿಡ್ ದಾಳಿ ಮಾಡುವ ಬೆದರಿಕೆ ಹಾಕಿದ್ದು, ಇದರಿಂದ ನನ್ನ ಪುತ್ರಿ ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.

ಲಖನೌ: ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ನನ್ನ ಅಪ್ರಾಪ್ತ ಪುತ್ರಿಯ ಮೇಲೆ ಆ್ಯಸಿಡ್ ದಾಳಿ ಮಾಡುವ ಬೆದರಿಕೆ ಹಾಕಿದ್ದು, ಇದರಿಂದ ನನ್ನ ಪುತ್ರಿ ಶಾಲೆಗೆ ಹೋಗಲು ಹೆದರುತ್ತಿದ್ದಾಳೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಉಚ್ಛಾಟಿತ ನಾಯಕ ಅಮರ್ ಸಿಂಗ್ ಅಜಂ ಖಾನ್ ರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದು, ಅವರು ಈ ದೇಶದಲ್ಲಿ ಜೀವಿಸಲು ಯೋಗ್ಯರಲ್ಲ. ದೇಶ ವಿಭಜನೆ ಸಂದರ್ಭದಲ್ಲಿ ಉಂಟಾಗದ ಕೋಮುಗಲಭೆ ಅವರು ಅಧಿಕಾರದಲ್ಲಿದ್ದಾಗ ವ್ಯಾಪಕವಾಗಿ ಆಗಿತ್ತು ಎಂದು ಕಿಡಿಕಾರಿದ್ದಾರೆ. ಅಲ್ಲದೆ ತಮ್ಮ ಪತ್ನಿ ಮತ್ತು ಮಗಳ ಮೇಲೆ ಆ್ಯಸಿಡ್ ದಾಳಿ ಮಾಡಿ ನನ್ನನ್ನು ಕೊಲ್ಲಬೇಕು ಎಂದು ಅಜಂ ಖಾನ್ ಹೇಳಿದ್ದರು ಎಂದು ಅಮರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. 
ಇದೇ ವೇಳೆ ಗವರ್ನರ್ ರಾಮ್ ನಾಯ್ಕ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ದೂರು ನೀಡುತ್ತೇನೆ ಎಂದು ಅಮರ್ ಸಿಂಗ್ ಹೇಳಿದ್ದಾರೆ. ಅಂತೆಯೇ ನನ್ನ ಮಗಳಿಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆಯ ಅಗತ್ಯತೆ ಇದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ. ಅಜಂ ಖಾನ್ ನೇತೃತ್ವದ ರಾಮ್ ಪುರದ ಮೌಲಾನ ಮಹಮದ್ ಅಲಿ ಜವಹರ್ ವಿವಿಗೆ ಬರುತ್ತಿರುವ ಆದಾಯದ ಮೂಲದ ಕುರಿತೂ ಸುಧೀರ್ಘ ತನಿಖೆಯಾಗಬೇಕು ಎಂದು ಆಗ್ರಹಿಸಿರುವ ಅಮರ್ ಸಿಂಗ್ ವಿವಿಯ ಚಾನ್ಸಿಲರ್ ರನ್ನು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT