ಪುಣೆ: ನಕ್ಸಲರೊಂದಿಗೆ ಸಂಪರ್ಕ ಹೊಂದಿರುವ ಶಂಕೆಯಿಂದಾಗಿ ದೇಶದ ಹಲವೆಡೆ ಇಂದು ಪ್ರಸಿದ್ಧ ಹೋರಾಟಗಾರರ ಮನೆ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಪುಣೆಯಲ್ಲಿ ನಡೆದ ಭೀಮಾ ಕೋರೆ ಗಾಂವ್ ಹಿಂಸಾಚಾರದ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಹೈದ್ರಾಬಾದಿನ ಎಡಪಂಥೀಯ ಹೋರಾಟಗಾರ, ಕ್ರಾಂತಿಕಾರಿ ಕವಿ ವರವರ ರಾವ್ , ಮುಂಬೈಯಲ್ಲಿ ವೆರ್ನಾನ್ ಗೊನ್ಜಾಲ್ವ್ಸ್, ಅರುಣ್ ಫೆರೀರಾ, ಛತ್ತೀಸ್ ಗಢದಲ್ಲಿ ಟ್ರೇಡ್ ಯೂನಿಯನ್ ಹೋರಾಟಗಾರ್ತಿ ಸುಧಾ ಭಾರಾದ್ವಾಜ್, ದೆಹಲಿಯಲ್ಲಿ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.