ಸಂಗ್ರಹ ಚಿತ್ರ 
ದೇಶ

1984ರ ದಂಗೆಯಲ್ಲಿ ಕಾಂಗ್ರೆಸ್‌ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು: ಸಿಎಂ ಅಮರೀಂದರ್ ಸಿಂಗ್

1984ರ ದಂಗೆಯಲ್ಲಿ ಕಾಂಗ್ರೆಸ್‌ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: 1984ರ ದಂಗೆಯಲ್ಲಿ ಕಾಂಗ್ರೆಸ್‌ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
1984 ಸಿಖ್ ದಂಗೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನೀಡಿದ್ದ ಹೇಳಿಕೆ ವಿಚಾರ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ ಇತ್ತ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು, 1984ರ ದಂಗೆಯಲ್ಲಿ ಕೆಲ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. 
ಈ ಬಗ್ಗೆ ಮಾತನಾಡಿರುವ ಅಮರೀಂದರ್ ಸಿಂಗ್ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆ ಬಳಿಕ ಸಿಖ್‌ ದಂಗೆ ನಡೆಯಿತು. ಆ ವೇಳೆ ಪ್ರಧಾನಿ ರಾಜೀವ್‌ ಗಾಂಧಿ ಬಂಗಾಳದ ಏರ್ ಪೋರ್ಟ್‌ನಲ್ಲಿದ್ದರು. ಈ ವೇಳೆ ಕೆಲ ಕಾಂಗ್ರೆಸ್‌ ನಾಯಕರು ಬಿಟ್ಟು ಉಳಿದ ಯಾರೂ ಅದರಲ್ಲಿ ಭಾಗಿಯಾಗಿಲ್ಲ. ಸಜ್ಜನ್‌ ಕುಮಾರ್‌, ಧರ್ಮದಾಸ್‌ ಶಾಸ್ತ್ರಿ, ಅರ್ಜುನ್‌ ದಾಸ್‌ ಹಾಗೂ ಇನ್ನೆರಡು ಮಂದಿ ಭಾಗಿಯಾಗಿದ್ದರು ಎಂದು  ಹೇಳಿದ್ದಾರೆ.
ಅತ್ತ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಈ ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿರುವ ಶಿರೋಮಣಿ ಅಕಾಲಿದಳ, ಈ ದಂಗೆಯ ಮುಖ್ಯ ಆರೋಪಿ ಜಗದೀಶ್‌ ಟೈಟ್ಲರ್‌ ಹೆಸರು ಹೇಳಿಲ್ಲ ಎಂದು ಆಕ್ಷೇಪ ವ್ಯಕ್ತ ಪಡಿಸಿದೆ. ಅಲ್ಲದೆ ಕೂಡಲೇ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT