ಸಂಗ್ರಹ ಚಿತ್ರ 
ದೇಶ

1984ರ ದಂಗೆಯಲ್ಲಿ ಕಾಂಗ್ರೆಸ್‌ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು: ಸಿಎಂ ಅಮರೀಂದರ್ ಸಿಂಗ್

1984ರ ದಂಗೆಯಲ್ಲಿ ಕಾಂಗ್ರೆಸ್‌ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: 1984ರ ದಂಗೆಯಲ್ಲಿ ಕಾಂಗ್ರೆಸ್‌ ಪಕ್ಷವಲ್ಲ, ಕೆಲ ಕೈ ನಾಯಕರು ಭಾಗಿಯಾಗಿದ್ದರು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
1984 ಸಿಖ್ ದಂಗೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನೀಡಿದ್ದ ಹೇಳಿಕೆ ವಿಚಾರ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ ಇತ್ತ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು, 1984ರ ದಂಗೆಯಲ್ಲಿ ಕೆಲ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. 
ಈ ಬಗ್ಗೆ ಮಾತನಾಡಿರುವ ಅಮರೀಂದರ್ ಸಿಂಗ್ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆ ಬಳಿಕ ಸಿಖ್‌ ದಂಗೆ ನಡೆಯಿತು. ಆ ವೇಳೆ ಪ್ರಧಾನಿ ರಾಜೀವ್‌ ಗಾಂಧಿ ಬಂಗಾಳದ ಏರ್ ಪೋರ್ಟ್‌ನಲ್ಲಿದ್ದರು. ಈ ವೇಳೆ ಕೆಲ ಕಾಂಗ್ರೆಸ್‌ ನಾಯಕರು ಬಿಟ್ಟು ಉಳಿದ ಯಾರೂ ಅದರಲ್ಲಿ ಭಾಗಿಯಾಗಿಲ್ಲ. ಸಜ್ಜನ್‌ ಕುಮಾರ್‌, ಧರ್ಮದಾಸ್‌ ಶಾಸ್ತ್ರಿ, ಅರ್ಜುನ್‌ ದಾಸ್‌ ಹಾಗೂ ಇನ್ನೆರಡು ಮಂದಿ ಭಾಗಿಯಾಗಿದ್ದರು ಎಂದು  ಹೇಳಿದ್ದಾರೆ.
ಅತ್ತ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಈ ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿರುವ ಶಿರೋಮಣಿ ಅಕಾಲಿದಳ, ಈ ದಂಗೆಯ ಮುಖ್ಯ ಆರೋಪಿ ಜಗದೀಶ್‌ ಟೈಟ್ಲರ್‌ ಹೆಸರು ಹೇಳಿಲ್ಲ ಎಂದು ಆಕ್ಷೇಪ ವ್ಯಕ್ತ ಪಡಿಸಿದೆ. ಅಲ್ಲದೆ ಕೂಡಲೇ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT