ನಂದಮೂರಿ ಹರಿಕೃಷ್ಣ 
ದೇಶ

ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ ದುರ್ಮರಣ

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ...

ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. 
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರು ಭೀಕರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಕಾಮಿನೇನಿ ಆಸ್ಪತ್ರೆಯಲ್ಲಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದಾರೆ. ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT