ನಂದಮೂರಿ ಹರಿಕೃಷ್ಣ 
ದೇಶ

ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ ದುರ್ಮರಣ

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ...

ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. 
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ನಂದಮೂರಿ ಹರಿಕೃಷ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರು ಭೀಕರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಕಾಮಿನೇನಿ ಆಸ್ಪತ್ರೆಯಲ್ಲಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದಾರೆ. ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT