ತೆಲುಗು ಕವಿ ವರವರ ರಾವ್ 
ದೇಶ

ಭೀಮಾ-ಕೊರೆಗಾಂವ್ ಹಿಂಸೆ; ಬಂಧಿತ ಮೂವರು ಕಾರ್ಯಕರ್ತರನ್ನು ಪುಣೆಗೆ ಕರೆತಂದ ಪೊಲೀಸರು

ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆಯಿಂದ ನಿನ್ನೆ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದ ...

ಪುಣೆ: ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆಯಿಂದ ನಿನ್ನೆ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದ ದೇಶದ ಪ್ರಮುಖ ಎಡಪಂಥೀಯ ಐವರು ಕಾರ್ಯಕರ್ತರಲ್ಲಿ ಮೂವರನ್ನು ಕಳೆದ ತಡರಾತ್ರಿ ಪುಣೆ ನಗರಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ತೆಲುಗು ಕವಿ ವರವರ ರಾವ್, ಕಾರ್ಯಕರ್ತ ವೆರ್ನನ್ ಗೊನ್ಸಲ್ವ್ಸ್ ಮತ್ತು ಅರುಣ್ ಫೆರ್ರೈರಾ ಅವರನ್ನು ಕರೆತರಲಾಗಿದ್ದು ಇಂದು ಸಂಜೆ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸುವ ಸಾಧ್ಯತೆಯಿದೆ.

ಪುಣೆಯಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿಯೇ ವರವರ ರಾವ್ ಅವರ ಹೈದರಾಬಾದ್ ನಿವಾಸ, ಮುಂಬೈನಲ್ಲಿ ಗೊನ್ಸಾಲ್ವ್ಸ್ ಮತ್ತು ಫೆರೀರಾ ಮನೆ, ವ್ಯಾಪಾರ ಒಕ್ಕೂಟ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರ ಫರೀದಾಬಾದ್ ನ ನಿವಾಸ ಮತ್ತು ಗೌತಮ್ ನವಲಖ ಅವರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT