ತೆಲುಗು ಕವಿ ವರವರ ರಾವ್ 
ದೇಶ

ಭೀಮಾ-ಕೊರೆಗಾಂವ್ ಹಿಂಸೆ; ಬಂಧಿತ ಮೂವರು ಕಾರ್ಯಕರ್ತರನ್ನು ಪುಣೆಗೆ ಕರೆತಂದ ಪೊಲೀಸರು

ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆಯಿಂದ ನಿನ್ನೆ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದ ...

ಪುಣೆ: ಮಾವೋವಾದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆಯಿಂದ ನಿನ್ನೆ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದ ದೇಶದ ಪ್ರಮುಖ ಎಡಪಂಥೀಯ ಐವರು ಕಾರ್ಯಕರ್ತರಲ್ಲಿ ಮೂವರನ್ನು ಕಳೆದ ತಡರಾತ್ರಿ ಪುಣೆ ನಗರಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ತೆಲುಗು ಕವಿ ವರವರ ರಾವ್, ಕಾರ್ಯಕರ್ತ ವೆರ್ನನ್ ಗೊನ್ಸಲ್ವ್ಸ್ ಮತ್ತು ಅರುಣ್ ಫೆರ್ರೈರಾ ಅವರನ್ನು ಕರೆತರಲಾಗಿದ್ದು ಇಂದು ಸಂಜೆ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸುವ ಸಾಧ್ಯತೆಯಿದೆ.

ಪುಣೆಯಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿಯೇ ವರವರ ರಾವ್ ಅವರ ಹೈದರಾಬಾದ್ ನಿವಾಸ, ಮುಂಬೈನಲ್ಲಿ ಗೊನ್ಸಾಲ್ವ್ಸ್ ಮತ್ತು ಫೆರೀರಾ ಮನೆ, ವ್ಯಾಪಾರ ಒಕ್ಕೂಟ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರ ಫರೀದಾಬಾದ್ ನ ನಿವಾಸ ಮತ್ತು ಗೌತಮ್ ನವಲಖ ಅವರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT