ಜೆಡಿಯು ಮುಖಂಡ ಪವನ್ ವರ್ಮಾ 
ದೇಶ

ನಕ್ಸಲ್ ಜೊತೆ ನಂಟು ಆರೋಪ: ಸರ್ಕಾರ ಸಾಕ್ಷ್ಯಧಾರ ಒದಗಿಸುವಂತೆ ಜೆಡಿಯು ಆಗ್ರಹ

ನಕ್ಸಲ್ ಜೊತೆ ಸಂಪರ್ಕದ ಶಂಕೆಯ ಮೇರೆಗೆ ಪುಣೆಯ ಪೊಲೀಸರು ಹಲವೆಡೆ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿರುವುದು ಇದೀಗ ಎನ್ ಡಿಎ ಮೈತ್ರಿ ಪಕ್ಷ ಜೆಡಿಯು ಅಸಮಾಧಾನಕ್ಕೆ ಕಾರಣವಾಗಿದೆ.

ನವದೆಹಲಿ :  ನಕ್ಸಲ್ ಜೊತೆ  ಸಂಪರ್ಕದ ಶಂಕೆಯ ಮೇರೆಗೆ  ಪುಣೆಯ ಪೊಲೀಸರು ಹಲವೆಡೆ ಸಾಮಾಜಿಕ ಹೋರಾಟಗಾರರನ್ನು ಬಂಧಿಸಿರುವುದು ಇದೀಗ ಎನ್ ಡಿಎ ಮೈತ್ರಿ ಪಕ್ಷ ಜೆಡಿಯು ಅಸಮಾಧಾನಕ್ಕೆ ಕಾರಣವಾಗಿದೆ.

ನಕ್ಸಲ್ ಚಟುವಟಿಕೆ ಆರೋಪದ ಮೇಲೆ  ಕ್ರಮ ಕೈಗೊಳ್ಳುವ ಮುಂಚೆ ಸರ್ಕಾರ ಆರೋಪಕ್ಕೆ ತಕ್ಕಂತೆ ಸೂಕ್ತ ಸಾಕ್ಷ್ಯಧಾರಗಳನ್ನು ಒದಗಿಸಬೇಕೆಂದು  ಜೆಡಿಯು ಆಗ್ರಹಿಸಿದೆ.

ಸಾಕ್ಷ್ಯಧಾರ ಒದಗಿಸದೆ ಈ ರೀತಿಯ ಕ್ರಮ ಕೈಗೊಳ್ಳುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದಂತಾಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ ಎಂದು ಜೆಡಿಯು ಮುಖಂಡ ಪವನ್ ವರ್ಮಾ ಹೇಳಿದ್ದಾರೆ.

ಸೂಕ್ತ ಸಾಕ್ಷ್ಯಧಾರ ಒದಗಿಸುವಲ್ಲಿ ಸರ್ಕಾರ ವಿಫಲವಾದ್ದಲ್ಲಿ  ಇಂತಹ ಕ್ರಮ ನನ್ನಲ್ಲಿ ಭಯ ಮೂಡಿಸುತ್ತದೆ.  ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಏನೂ ಸಂಭವಿಸುತ್ತೋ ಅಂತಹ ಪರಿಸ್ಥಿತಿಯ ವಿರುದ್ಧ ಎಲ್ಲರೂ ಸರ್ವಾನುಮತದಿಂದ ಧ್ವನಿ ಎತ್ತಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT