ನಂದಮೂರಿ ಹರಿಕೃಷ್ಣ 
ದೇಶ

ನಂದಮೂರಿ ಹರಿಕೃಷ್ಣರ ಕಾರು ಅಪಘಾತದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

ನಟ, ಟಿಡಿಪಿ ಮುಖಂಡ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದು ಕಾರು ಅಪಘಾತದ ಭೀಕರತೆಯನ್ನು ಪ್ರತ್ಯಕ್ಷದರ್ಶಿಯೊಬ್ಬರು ಬಿಚ್ಚಿಟ್ಟಿದ್ದಾರೆ...

ನಲ್ಗೊಂಡ(ಆಂಧ್ರ): ನಟ, ಟಿಡಿಪಿ ಮುಖಂಡ ನಂದಮೂರಿ ಹರಿಕೃಷ್ಣ ಅವರು ಅಪಘಾತದಲ್ಲಿ ದುರ್ಮರಣ ಹೊಂದಿದ್ದು ಕಾರು ಅಪಘಾತದ ಭೀಕರತೆಯನ್ನು ಪ್ರತ್ಯಕ್ಷದರ್ಶಿಯೊಬ್ಬರು ಬಿಚ್ಚಿಟ್ಟಿದ್ದಾರೆ. 
ಬೆಳಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ನಾನು ಮತ್ತು ನನ್ನ ಫೋಟೋಗ್ರಾಫರ್ ಫೋಟೋ ಶೂಟ್ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದೇವು. ಆಗ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಸುಮಾರು 15 ಅಡಿ ಮೇಲಕ್ಕೆ ಹಾರಿ ನಮ್ಮ ಕಾರಿನ ಕಡೆ ಬಂತು. 
ಇದನ್ನು ಕಂಡು ನಾನು ತಕ್ಷಣ ನನ್ನ ಕಾರಿನ ವೇಗವನ್ನು ಕಡಿಮೆ ಮಾಡಿ ಕಾರನ್ನು ಎಡಕ್ಕೆ ತಿರುಗಿಸಿದೆ. ಆಗ ಎದುರುಗಡೆಯಿಂದ ಬಂದ ಕಾರು ನಮ್ಮ ಕಾರಿನ ತುದಿಗೆ ತಗುಲಿ ಕೆಳಗೆ ಬಿತ್ತು.
ನಾವು ಕೂಡಲೇ ಕಾರನ್ನು ನಿಲ್ಲಿಸಿ ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ಹೊರಗಡೆ ಎಳೆದೆವು. ಆಗ ನಮಗೆ ತಿಳಿಯಿತು ಕಾರಿನಲ್ಲಿ ಇದ್ದಿದ್ದು ನಟ, ಟಿಡಿಪಿ ಮುಖಂಡ ನಂದಮೂರಿ ಹರಿಕೃಷ್ಣ ಅಂತ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. 
ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದಮೂರಿ ಹರಿಕೃಷ್ಣ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಕಾಮಿನೇನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT