ಸಂಗ್ರಹ ಚಿತ್ರ 
ದೇಶ

ಉಗ್ರ ತರಭೇತಿಗೆ ಯುವಕರನ್ನು ಕಳುಹಿಸುತ್ತಿದ್ದ ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿ, ಹಿಜ್ಬುಲ್ ಉಗ್ರ ಬಂಧನ

ಸ್ಥಳೀಯ ಯುವಕರನ್ನು ಉಗ್ರ ತರಭೇತಿಗಾಗಿ ಪಾಕಿಸ್ತಾನ ಆಕ್ರಮಿಕ ಕಾಶ್ಮೀರಕ್ಕೆ ಕಳುಹಿಸುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಹಾಗೂ ಹಿಜ್ಬುಲ್ ಉಗ್ರ ಸಂಘಟನೆ ಕಾರ್ಯಕರ್ತನೊಬ್ಬನನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...

ಶ್ರೀನಗರ: ಸ್ಥಳೀಯ ಯುವಕರನ್ನು ಉಗ್ರ ತರಭೇತಿಗಾಗಿ ಪಾಕಿಸ್ತಾನ ಆಕ್ರಮಿಕ ಕಾಶ್ಮೀರಕ್ಕೆ ಕಳುಹಿಸುತ್ತಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಹಾಗೂ ಹಿಜ್ಬುಲ್ ಉಗ್ರ ಸಂಘಟನೆ ಕಾರ್ಯಕರ್ತನೊಬ್ಬನನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 
ಫೆರೋಜ್ ಅಹ್ಮದ್ ಲೋನ್ ಬಂಧನಕ್ಕೊಳಗಾಗಿರುವ ಪೊಲೀಸ್ ಅಧಿಕಾರಿ ಎಂದು ಹೇಳಲಾಗುತ್ತಿದೆ. 
ಫೆರೋಜ್ ಜಮ್ಮುವಿನ ಅಂಬ್ಫಾಲಾ ಜೈಲಿನಲ್ಲಿ ಕಳೆದ 5 ತಿಂಗಳಿನಿಂದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ. 
ಇದಲ್ಲದೆ, ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಾರ್ಯಕರ್ತನಾಗಿದ್ದ ಇಶಾಖ್ ಪಲ್ಲ ಎಂಬಾದನನ್ನೂ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 
ಕೆಲ ದಿನಗಳ ಹಿಂದಶ್ಟೇ ಸುಹೈಲ್ ಅಹ್ಮದ್ ಭಟ್ ಮತ್ತು ದಾನಿಶ್ ಗುಲಾಂ ಲನೋನ್ ಎಂಬುವವರನ್ನು ಭದ್ರತಾ ಪಡೆಗಳು ಬಂಧನಕ್ಕೊಳಪಡಿಸಿದ್ದರು. ಇಬ್ಬರೂ ಇಶರ್ ಪಲ್ಲನಿಂದ ಪ್ರೇರಿತರಾಗಿ ಉಗ್ರ ತರಭೇತಿ ಪಡೆಯಲು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬಂಧನಕ್ಕೊಳಪಡಿಸಲಾಗಿತ್ತು. 
ಬಂಧಿತ ದುಷ್ಕರ್ಮಿಗಳು ಶ್ರೀನಗರ ಕೇಂದ್ರೀಯ ಕಾರಾಗೃಹದಲ್ಲಿ ಸಭೆ ನಡೆಸಿ ಮಾತುಕತೆ ನಡೆಸುತ್ತಿದ್ದರು. 2017ರ ಅಕ್ಟೋಬರ್ 25 ರಂದು ಕಾರಾಗೃಹದಲ್ಲಿ ಸಭೆ ನಡೆಸಿದ್ದರು. ಆರೋಪಿಗಳು ಬ್ಲಾಕ್'ಬೆರ್ರಿ ಮೆಸೆಂಜರ್ ನಿಂದ ಒಬ್ಬರಿಗೊಬ್ಬರು ಸಂಪರ್ಕಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. 
ಬಂಧನಕ್ಕೊಳಗಾಗಿರುವ ಇಶಕ್ ನನ್ನು ಎನ್ಐಎ ವಿಶೇಷ ನ್ಯಾಯಾಲಯ 10 ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿದ್ದು, ಪೊಲೀಸ್ ಅಧಿಕಾರಿಯನ್ನು ಶೀಘ್ರದಲ್ಲಿಯೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT